Advertisement

ಕಾರ್ಕಳ: ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ಮಹಿಳೆ ಮೃತ್ಯು

09:03 PM May 05, 2023 | Team Udayavani |

ಕಾರ್ಕಳ: ಕುಕ್ಕುಂದೂರು ಗ್ರಾಮದ ಜೋಡುರಸ್ತೆ ನಿವಾಸಿ ಜಯಲಕ್ಷ್ಮಿ (57) ಅವರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಚಿಕಿತ್ಸೆ ಫ‌ಲಿಸದೆ ಮೃತಪಟ್ಟ ಘಟನೆ ನಡೆದಿದೆ.

Advertisement

ಪತಿ ಕ್ಯಾಟರಿಂಗ್‌ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿದ್ದ ವೇಳೆ ಪತ್ನಿ ಜಯಲಕ್ಷ್ಮಿ ವಾಂತಿ ಮಾಡಿದ್ದರು. ಕೂಡಲೇ ಅವರನ್ನು ಚಿಕಿತ್ಸೆಗೆಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಉಡುಪಿಗೆ ಹೋಗುವಂತೆ ತಿಳಿಸಿದ್ದು, ಅಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತಿದ್ದ ಅವರು ಚಿಕಿತ್ಸೆ ಫ‌ಲಿಸದೆ ಮೇ 4ರಂದು ಮೃತಪಟ್ಟಿದ್ದಾರೆ.

ಮಗನ ಮದುವೆಯ ಬೇಸರ?
ಮೃತರ ಮಗನ ಮದುವೆ ನಿಗದಿಯಾಗಿದ್ದು, ಅದೇ ಕಾರಣದಿಂದ ಬೇಸರದಿಂದ ಇದ್ದು ತಾನು ಸಾಯುತ್ತೇನೆಂದು ಹೇಳುತ್ತಿದ್ದರು. ಅದೇ ಕಾರಣಕ್ಕೆ ಬೇಸರಗೊಂಡು ಮಾತ್ರೆಯನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next