Advertisement

“ತಾಲೂಕಿನಲ್ಲಿ ಅಂತರ್ಜಲ ಮರುಪೂರಣ’

06:20 AM Jul 24, 2017 | |

ಕಾರ್ಕಳ: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಕಳ ಇದರ ವತಿಯಿಂದ ಮಾರುಕಟ್ಟೆ ಪ್ರಾಂಗಣದಲ್ಲಿ ಗಿಡ ನೆಡುವ ಹಾಗೂ ಪ್ರಗತಿಪರ ರೈತರನ್ನು ಸಮ್ಮಾನಿಸುವ ಕಾರ್ಯಕ್ರಮ ಶನಿವಾರ ಮಾರುಕಟ್ಟೆಯ ಸಭಾಭವನದಲ್ಲಿ ನಡೆಯಿತು. 

Advertisement

ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಮಾರುಕಟ್ಟೆಯ ಪ್ರಾಂಗಣದಲ್ಲಿ  ವಿವಿಧ ರೀತಿಯ ಗಿಡಗಳನ್ನು ನೆಟ್ಟು ಬಳಿಕ ನಡೆದ ಸಭಾ ಕಾರ್ಯಕ್ರಮ ವನ್ನುದ್ದೇಶಿಸಿ ಮಾತನಾಡಿ, ತಾಲೂಕಿನಲ್ಲಿ  ಪರಿಸರ ಉತ್ಸವ, ಇಂಗುಗುಂಡಿಗಳ ನಿರ್ಮಾಣ ಸೇರಿದಂತೆ ವಿವಿಧ ರೀತಿಯಲ್ಲಿ ಪರಿಸರಕ್ಕೆ ಪೂರಕವಾಗುವ ಕೆಲಸಗಳನ್ನು ಮಾಡಲಾಗಿದೆ. ಈ ವರ್ಷ ತಾಲೂಕಿನ ಕೆರೆಗಳ ಅಭಿವೃದ್ಧಿಗೆ ವಿಶೇಷವಾದ ಮಹತ್ವ ನೀಡಲಾಗಿದ್ದು, ಮುಂದಿನ ವರ್ಷ ಮತ್ತಷ್ಟು ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು.ಅಂತರ್ಜಲ ಕುರಿತಾಗಿ ತಾಲೂಕಿನಲ್ಲಿಯೂ ಕೆಲವೊಂದು ಆತಂಕಗಳಿವೆ. ಆ ಆತಂಕಗಳನ್ನು ಪರಿ ಹರಿಸುವ ನಿಟ್ಟಿನಲ್ಲಿ ಅಂತರ್ಜಲ ಮರುಪೂರಣ ಕಾರ್ಯಕ್ರಮಗಳನ್ನು ಮಾಡಲಾಗಿದೆ ಎಂದರು.

ರೈತರು ಶ್ರಮಿಕರು, ಅವರಿಗೆ ಕೊಡುವ ಸಮ್ಮಾನ ಎಲ್ಲಾ ಸಮ್ಮಾನಗಳನ್ನು ಮೀರಿದ್ದು ಎಪಿಎಂಸಿ ಅಂತಹ ಸಮ್ಮಾನ ಮಾಡಿರುವುದು ಶ್ಲಾಘನೀಯ ಎಂದವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಪಿಎಂಸಿ ಅಧ್ಯಕ್ಷ ಮುಟ್ಲುಪಾಡಿ ಸತೀಶ್‌ ಶೆಟ್ಟಿ ಮಾತನಾಡಿ,ಎ.ಪಿ.ಎಂಸಿ ಪ್ರಾಂಗಣದಲ್ಲಿ ಈಗಾಗಲೇ 200 ಗಿಡಗಳನ್ನು ನೆಡುವ ಗುರಿ ಹೊಂದಲಾಗಿದೆ.ಸಾರ್ವಜನಿಕರು ಹಾಗೂ ಅಧಿಕಾರಿಗಳ ಸಹಕಾರದಿಂದ ತಾಲೂಕಿನಲ್ಲಿ ಪರಿಸರ ಪೂರಕ ಕಾರ್ಯಕ್ರಮಗಳು ಯಶಸ್ವಿಯಾಗಲಿವೆ ಎಂದರು.

ಇದೇ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರಾದ ಸದಾನಂದ ಶೆಟ್ಟಿ,ರಾಧಾಕೃಷ್ಣ ನಾಯ್ಕ, ಗೋವಿಂದ ಬಂಗೇರ,ವಿಲಿಯಂ ಮಸ್ಕರೇನ್ಹಸ್‌, ಸತ್ತಾರ್‌ ಸಾಹೇಬ್‌ ಅವರನ್ನು ಸಮ್ಮಾನಿಸಲಾಯಿತು.

Advertisement

ತಾ.ಪಂ. ಅಧ್ಯಕ್ಷೆ ಮಾಲಿನಿ ಶೆಟ್ಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ಆರ್‌.ಕೆ. ಭಟ್‌ ಮಾತನಾಡಿದರು. ಜಿ.ಪಂ. ಸದಸ್ಯರಾದ ರೇಶ್ಮಾ, ದಿವ್ಯಾ ಗಿರೀಶ್‌, ಪುರಸಭಾ ಅಧ್ಯಕ್ಷೆ ಅನಿತಾ ಅಂಚನ್‌,ಉಪಾಧ್ಯಕ್ಷ ಗಿರಿಧರ್‌ ನಾಯಕ್‌, ತಾ.ಪಂ. ಉಪಾಧ್ಯಕ್ಷ ಗೋಪಾ ಮೂಲ್ಯ, ಎಂಪಿಎಂಸಿ ಸದಸ್ಯರಾದ ದಿನೇಶ್‌ ಪೈ, ಮೊದಲಾದವರು ಉಪಸ್ಥಿತರಿದ್ದರು.
ಎಂಪಿಎಂಸಿ ಉಪಾಧ್ಯಕ್ಷ ಸಂಜೀವ ನಾಯ್ಕ ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀಧರ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸದಸ್ಯ ಜಯವರ್ಮ ಜೈನ್‌ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next