Advertisement

Karkala ಪರಶುರಾಮ ಥೀಮ್‌ ಪಾರ್ಕ್‌; ಸಿಐಡಿ ತನಿಖೆಗೆ ನೀಡಿದ್ದನ್ನು ಸ್ವಾಗತಿಸಿದ ಸುನಿಲ್

05:03 PM Feb 08, 2024 | Team Udayavani |

ಉಡುಪಿ: ”ಪರಶುರಾಮ ಥೀಂ ಪಾರ್ಕ್ ವಿಚಾರದ ಬಗ್ಗೆ ಅನಗತ್ಯವಾಗಿ ಎಬ್ಬಿಸುತ್ತಿದ್ದ ಊಹಾಪೋಹ ಹಾಗೂ ಸುಳ್ಳು ಆರೋಪಗಳಿಗೆ ಒಂದು ಪೂರ್ಣ ವಿರಾಮ ಬೇಕಿತ್ತು. ಈ ಸುಳ್ಳು ಆರೋಪಗಳ ತನಿಖೆಗಾಗಿ ರಾಜ್ಯ ಸರ್ಕಾರ ಕೊನೆಗೂ ಸಿಐಡಿ ತನಿಖೆ ನಡೆಸಲು ಮುಂದಾಗಿರುವುದನ್ನು ನಾನು ಸ್ವಾಗತಿಸುತ್ತೇನೆ” ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ಫೇಸ್ ಬುಕ್ ಪೋಸ್ಟ್ ಮಾಡಿರುವ ಸುನಿಲ್ ಕುಮಾರ್, ”ಈ ಬಗ್ಗೆ ತನಿಖೆ ನಡೆಯಬೇಕೆಂದು ಆರು ತಿಂಗಳು ಹಿಂದೆಯೇ ನಾನು ಆಗ್ರಹಿಸಿದ್ದೆ.ಸರಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸುವ ಜತೆಗೆ ಥೀಂ ಪಾರ್ಕ್ ಅಭಿವೃದ್ಧಿಗೆ ಹಿಂದಿನ ಸರ್ಕಾರದ ಅವಧಿಯಲ್ಲಿ ತಾತ್ವಿಕ ಒಪ್ಪಿಗೆ ನೀಡಿದ ಬಾಕಿ ಹಣವನ್ನೂ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಳಿಸಬೇಕು. ಆದಷ್ಟು ಬೇಗ ಥೀಂ ಪಾರ್ಕ್ ಪ್ರವಾಸಿಗಳ ವೀಕ್ಷಣೆಗೆ ಮುಕ್ತಗೊಳ್ಳುವಂತಾಗಬೇಕೆಂದು ಒತ್ತಾಯಿಸುತ್ತೇನೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Karkala ಪರಶುರಾಮ ಥೀಮ್‌ ಪಾರ್ಕ್‌ ಕಾಮಗಾರಿ ಅವ್ಯವಹಾರ; ಸಿಐಡಿ ತನಿಖೆಗೆ ಸಿಎಂ ಆದೇಶ

”ಸಿಐಡಿ ತನಿಖೆಗೆ ಒತ್ತಾಯ ಹಾಗೂ ಮುತುವರ್ಜಿ ತೋರಿದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಶೇಷ ಧನ್ಯವಾದಗಳು” ಎಂದು ಕೊನೆಯಲ್ಲಿ ಸೇರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next