Advertisement

Karkala: ಉಳುಮೆ ಮಾಡುತಿದ್ದ ಕಾರ್ಮಿಕ ಸಾವು

01:14 AM Jul 02, 2024 | Team Udayavani |

ಕಾರ್ಕಳ: ಗದ್ದೆಯಲ್ಲಿ ಉಳುಮೆ ಮಾಡುತಿದ್ದ ವೇಳೆ ಎದೆನೋವಿನಿಂದ ಅಸ್ವಸ್ಥಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಬೆಳ್ಮಣ್‌ ಗ್ರಾಮದಲ್ಲಿ ಸಂಭವಿಸಿದೆ.

Advertisement

ಬೆಳ್ಮಣ್‌ ಗ್ರಾಮದ ಸಂಜೀವ (40) ಅವರು ಇಲ್ಲಿನ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯಿರುವ ಪ್ರಕಾಶ್‌ ಅವರಿಗೆ ಸೇರಿದ ಗದ್ದೆಯಲ್ಲಿ ಟ್ರ್ಯಾಕ್ಟರ್‌ನಿಂದ ಉಳುಮೆ ಮಾಡುತ್ತಿದ್ದರು.

ಈ ವೇಳೆ ಎದೆನೋವಿನಿಂದ ಅಸ್ವಸ್ಥಗೊಂಡ ಅವರಿಗೆ ಸ್ಥಳೀಯ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next