Advertisement

ಕಾರ್ಕಳ: ಆಟಿಡೊಂಜಿ ಬಂಟ ಕೂಟ, ಪೂರ್ವಭಾವಿ ಸಭೆ

05:30 AM Aug 04, 2017 | Harsha Rao |

ಹೆಬ್ರಿ: ಕಾರ್ಕಳ ತಾಲೂಕು ಪೆರ್ವಾಜೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಆ. 13ರಂದು ಕಾರ್ಕಳ ತಾಲೂಕು ವ್ಯಾಪ್ತಿಯ ಆಟಿಡೊಂಜಿ ಬಂಟ ಕೂಟವನ್ನು ಸ್ವಸಮಾಜದ ಬಂಧುಗಳಿಗೆ ಆಯೋಜಿಸಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃ ಸಂಘ (ರಿ.) ಮಂಗಳೂರು, ದ.ಕ. ಇದರ ಕಾರ್ಕಳ ತಾಲೂಕು ಸಂಚಾಲಕ ಸುಹಾಸ್‌ ಹೆಗ್ಡೆ ನಂದಳಿಕೆ ಹೇಳಿದರು.

Advertisement

ಅವರು ಜು. 30ರಂದು ಕಾರ್ಕಳ ಸ್ವಾಗತದಲ್ಲಿ ನಡೆದ ಕಾರ್ಕಳ ಬಂಟರ ಸಂಘದ ಆಶ್ರಯದಲ್ಲಿ ನಡೆಯಲಿರುವ ಬಂಟ ಆಟಿಡೊಂಜಿ ಬಂಟ ಕೂಟ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. 

ಬೆಳಗ್ಗೆ 8.15ರಿಂದ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ವಿವಿಧ ಒಳಾಂಗಣ ಹಾಗೂ ಹೊರಾಂಗಣ ಕ್ರೀಡೆಗಳು, ತುಳುನಾಡಿನ ಸಾಂಪ್ರದಾಯಿಕ ತಿಂಡಿ ತಿನಿಸುಗಳ ಪ್ರದರ್ಶನ, ಪ್ರಾಚ್ಯ ವಸ್ತುಗಳ ಪ್ರದರ್ಶನ, ಪ್ರತಿಭಾ ಪುರಸ್ಕಾರ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. 

ಈ ಸಂದರ್ಭದಲ್ಲಿ  ರವೀಂದ್ರ ಶೆಟ್ಟಿ ಬಜಗೋಳಿ, ಪ್ರಶಾಂತ ಶೆಟ್ಟಿ ಕಾರ್ಕಳ, ಸುನಿಲ್‌ ಕುಮಾರ್‌ ಶೆಟ್ಟಿ, ಚೇತನ್‌ ಕುಮಾರ್‌ ಶೆಟ್ಟಿ, ಅರುಣ್‌ ಕುಮಾರ್‌ ಶೆಟ್ಟಿ, ಶಾಮ್‌ ಶೆಟ್ಟಿ, ಜ್ಯೋತಿ ಶೆಟ್ಟಿ, ದಿವಾಕರ ಶೆಟ್ಟಿ  ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next