Advertisement

Karkala: ಸಿಡಿಲು ಬಡಿದು ಮೂವರಿಗೆ ಗಾಯ

12:39 AM Oct 14, 2024 | Team Udayavani |

ಕಾರ್ಕಳ:ತಾಲೂಕಿನ ವಿವಿಧ ಭಾಗಗಳಲ್ಲಿ ರವಿವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

Advertisement

ಬಜಗೋಳಿ, ಮಿಯ್ಯಾರು ಭಾಗದಲ್ಲಿ ಸಿಡಿಲಿನ ತೀವ್ರತೆ ಹೆಚ್ಚಿತ್ತು.ಮಿಯ್ಯಾರು ಕೈಗಾರಿಕ ಪ್ರಾಂಗಣ ವ್ಯಾಪ್ತಿಯ ಮೊರಾರ್ಜಿ ಶಾಲೆ ಬಳಿ ಸಂಭವಿಸಿಧ ಸಿಡಿಲಘಾತಕ್ಕೆ ಇಬ್ಬರು ಕಾರ್ಮಿಕರು ಹಾಗೂ ಓರ್ವ ಬಾಲಕ ಸಹಿತ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಮಿಳು ಮೂಲದ ಸುಬ್ರಹ್ಮಣ್ಯ, ಆನಂದ, ಸುರೇಶ ಎಂದು ಗುರುತಿಸಲಾಗಿದೆ. ಮನೆಯ ಜಗಲಿಯಲ್ಲಿ ಕುಳಿತು ಮಾತನಾಡುತ್ತಿದ್ದಾಗ ಸಿಡಿಲು ಬಡಿದಿದೆ.

ಗಾಯಾಳುಗಳನ್ನು ತತ್‌ಕ್ಷಣವೇ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿ ಅಲ್ಲಿ ಚಿಕಿತ್ಸೆ ನೀಡಲಾಗಿದೆ.

ಸಿಡಿಲಿನ ತೀವ್ರತೆಗೆ ಮೂವರ ಮೈ ಮೇಲೆ ಬೆಂಕಿಯಲ್ಲಿ ಸುಟ್ಟಂತಹ ಗಾಯಗಳು ಕಾಣಿಸಿಕೊಂಡಿವೆ. ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next