Advertisement
ಪರಿಣಾಮ ಸಾಧುವಾಗಿ, ಹಿಂದುತ್ವ ಪ್ರತಿಪಾದಕರಾಗಿ, ಎಲ್ಲಕ್ಕಿಂತ ಮುಖ್ಯವಾಗಿ ಐದು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಜನಪ್ರಿಯತೆ ಕಡೆಗೂ ಅವರನ್ನು ಸಿಎಂ ಆಗಿಸಿದೆ. ಅಷ್ಟಕ್ಕೂ, ಯೋಗಿ ಆದಿತ್ಯನಾಥ್ “ಕರ್ಮಯೋಗಿ’, ದಿನದ 24 ಗಂಟೆಗಳ ಕಾಲ ಜನಕಲ್ಯಾಣಕ್ಕಾಗಿ ದುಡಿಯುತ್ತಾರೆನ್ನುವ ನಂಬಿಕೆ ಪ್ರಧಾನಿ ಮೋದಿ ಅವರದ್ದಾಗಿರುವುದೂ ಇದಕ್ಕೊಂದು ಕಾರಣವಾಗಿದೆ. ಹಾಗೇ, ಚುನಾವಣೆಗೂ ಮೊದಲ ಪ್ರಚಾರದ ಸಂದರ್ಭದಲ್ಲಿ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಮತ್ತು ಮಾಫಿಯಾ ವಿರುದ್ಧದ ಹೋರಾಟದ ತಂತ್ರವನ್ನೇ ಪ್ರಮುಖ ಅಜೆಂಡಾ ಎನ್ನುವಂತೆ ಬಿಂಬಿಸಿಕೊಂಡಿದ್ದರು. ಯೋಗಿ ಆದಿತ್ಯನಾಥ್ ಕೂಡ ಈ ಎರಡು ವಿಚಾರಗಳಲ್ಲಿ ಬದ್ಧತೆ ತೋರಿಕೊಂಡು ಬಂದಿರುವುದು, ಅವರನ್ನು ಸಿಎಂ ಸ್ಥಾನಕ್ಕೆ ಅರ್ಹರನ್ನಾಗಿಸಲು ಪ್ರಮುಖ ಕಾರಣಗಳಲ್ಲೊಂದಾಗಿದೆ.
ದೇಶದ ಅತಿ ಜನನಿಬಿಡ ರಾಜ್ಯದ ನೊಗ ಹೊರುವ ಯೋಗ ಯೋಗಿ ಆದಿತ್ಯನಾಥ್ ಅವರಿಗೆ ಸಿಕ್ಕಿದೆ. ಈ ಬಾರಿಯ ಚುನಾವಣೆಯಲ್ಲಿ ಪ್ರಧಾನಿ ಮೋದಿ ನಂತರ ಬಿಜೆಪಿಯ ಪ್ರಮುಖ ಚಹರೆಯಾಗಿದ್ದ ಈ ನಾಯಕ ಚಿಕ್ಕ ವಯಸ್ಸಿನಿಂದಲೇ ಬಲಿಷ್ಠ ಬೇಸ್ ನಿರ್ಮಿಸಿಕೊಂಡೇ ಬಂದವರು. ಸಾಮಾನ್ಯ ರಜಪೂತ ಕುಟುಂಬದಲ್ಲಿ ಹುಟ್ಟಿದ ಅಜಯ್ ಸಿಂಗ್ ಬಿಶ್¤ ಅದಿತ್ಯನಾಥ್ ಆಗಿ ಬದಲಾಗುವುದಕ್ಕೂ ಮುನ್ನ ಗಣಿತದಲ್ಲಿ ಪದವಿ ಪಡೆದಿದ್ದರು. ಚಿಕ್ಕ ವಯಸ್ಸಿನಿಂದಲೇ ಪ್ರಬಲ ವಾಗ್ಮಿಯಾಗಿ ಗುರುತಿಸಿಕೊಂಡಿದ್ದರಿಂದ ಗೋರಖಪುರದಲ್ಲಿ ಅವರ ಬೆಂಬಲಿಗರ ಸಂಖ್ಯೆ ಬೆಳೆದುಬಿಟ್ಟಿತ್ತು. 1998ರಲ್ಲಿ ತಮ್ಮ 26ನೇ ವಯಸ್ಸಿಗೇ ಸಂಸದರಾಗಿ ಆಯ್ಕೆಯಾದ ಆದಿತ್ಯನಾಥ್, 12ನೇ ಲೋಕಸಭೆಯ ಅತಿ ಕಿರಿಯ ಸಂಸದರಾಗಿದ್ದರು. ಇದೇ ಗೋರಖಪುರ ಕ್ಷೇತ್ರದಿಂದ 5 ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ.
Related Articles
Advertisement
2014ರಲ್ಲಿ ಗೋರಖ್ಪುರದ ಗೋರಖ್ನಾಥ್ ಮಠದ ಪೀಠಾಧೀಶ ಸ್ಥಾನವೂ ಅವರಿಗೆ ಒಲಿದು ಬಂದಿತು. ಈ ಮಠವು ಶೈವ ಪಂಥದ ಉಪಸಂಪ್ರದಾ ಯವಾಗಿದ್ದು, ಅದ್ವೆ„ತ ವೇದಾಂತ ಮತ್ತು ಬೌದ್ಧ ಪರಂಪರೆಯ ಮಿಶ್ರಣವಾಗಿದೆ. ಶಿವನ ಆರಾಧಕರಾ ಗಿರುವ ನಾಥರು ಭಾರತದಲ್ಲಿ “ಯೋಗ’ ಚಳವಳಿ ಹಬ್ಬುವುದರಲ್ಲಿ ಪ್ರಮುಖ ಕಾರಣಕರ್ತರು. ಯೋಗದ ಪ್ರಚಾರಕರೂ ಆಗಿರುವ ಯೋಗಿ ದೇಶ ದಲ್ಲಿ ಯೋಗ ದಿನಾಚರಣೆಯ ಬಗ್ಗೆ ಅಪಸ್ವರವೆದ್ದಾಗ ಪ್ರಬಲವಾಗಿ ಅದರ ಪರ ಧ್ವನಿಯೆತ್ತಿದವರು.
ಉತ್ತರಾಖಂಡ ಸಿಎಂ ಆಗಿ ತ್ರಿವೇಂದ್ರ ಸಿಂಗ್ ಪ್ರಮಾಣಡೆಹ್ರಾಡೂನ್: ಉತ್ತರಾಖಂಡದ 8ನೇ ಮುಖ್ಯಮಂತ್ರಿಯಾಗಿ ಬಿಜೆಪಿ ಮುಖಂಡ ತ್ರಿವೇಂದ್ರ ಸಿಂಗ್ ರಾವತ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ. ಈ ಹಿಂದೆ ಆರ್ಎಸ್ಎಸ್ ಪ್ರಚಾರಕರಾಗಿ ಸೇವೆ ಸಲ್ಲಿಸಿದ್ದ ರಾವತ್ ಅವರಿಗೆ ರಾಜ್ಯಪಾಲ ಕೆ.ಕೆ.ಪೌಲ್ ಅವರು ಪ್ರಮಾಣವಚನ ಬೋಧಿಸಿದರು. ರಾವತ್ ಅವರೊಂದಿಗೆ 9 ಮಂದಿ ಸಚಿವರೂ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ಪಕ್ಷದ ಹಲವು ಮುಖಂಡರು ಸಮಾರಂಭದಲ್ಲಿ ಭಾಗವಹಿಸಿದ್ದರು. ಸತ್ಪಾಲ್ ಮಹಾರಾಜ್, ಹರಾಕ್ ಸಿಂಗ್ ರಾವತ್, ಮದನ್ ಕೌಶಿಕ್, ಅರವಿಂದ್ ಪಾಂಡೆ, ಸುಬೋಧ್ ಉನಿಯಾಲ್, ಯಶ್ಪಾಲ್ ಆರ್ಯ ಮತ್ತು ಪ್ರಕಾಶ್ ಪಂತ್ ಸಚಿವ ಸಂಪುಟ ಸೇರಿದ ಪ್ರಮುಖರು. ಸಾಧು “ಪ್ರವಚನ’
ಉತ್ತರ ಪ್ರದೇಶದ ಎರಡೂವರೆ ವರ್ಷದ ಆಡಳಿತದಲ್ಲಿ 450 ಗಲಭೆಗಳಾಗಿವೆ. ಏಕೆಂದರೆ ಒಂದು ನಿರ್ದಿಷ್ಟ ಕೋಮಿನ ಜನಸಂಖ್ಯೆ ಹೆಚ್ಚಾಗುತ್ತಿದೆ. ಇಲ್ಲಿನ ಉತ್ತರ ಭಾಗದಲ್ಲೇಕೆ ಗಲಭೆಗಳಾಗಿಲ್ಲ? ಇದನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಯಾವ ಪ್ರದೇಶಗಳಲ್ಲಿ ಅಲ್ಪಸಂಖ್ಯಾತರ ಸಂಖ್ಯೆ 10-20 ಪ್ರತಿಶತವಿರುತ್ತದೋ, ಅಲ್ಲಿ ಚಿಕ್ಕ ಪುಟ್ಟ ಘಟನೆಗಳು ನಡೆಯುತ್ತಿರುತ್ತವೆ. ಎಲ್ಲಿ ಅವರ ಸಂಖ್ಯೆ 20-35 ಪ್ರತಿಶತವಿರುತ್ತದೋ, ಅಲ್ಲಿ ಗಂಭೀರ ಕೋಮುಗಲಭೆಗಳಾಗುತ್ತವೆ. ಅವರ ಸಂಖ್ಯೆ 35%ಗಿಂತ ಹೆಚ್ಚಿರುವ ಪ್ರದೇಶಗಳಲ್ಲಿ ಅನ್ಯಕೋಮಿನವರಿಗೆ ಜಾಗವೇ ಇರುವುದಿಲ್ಲ. ಭಾರತವನ್ನು ಕ್ರೈಸ್ತೀಕರಣಗೊಳಿಸುವ ಹುನ್ನಾರದ ಭಾಗವಾಗಿದ್ದರು ಮದರ್ ಥೆರೇಸಾ. ಸೇವೆಯ ಹೆಸರಲ್ಲಿ ಹಿಂದೂಗಳನ್ನು ಮತಾಂತರ ಮಾಡಲಾಯಿತು. ಯೋಗವನ್ನು ಆರಂಭಿಸಿದ ಅತಿದೊಡ್ಡ ಯೋಗಿಯೆಂದರೆ ಮಹಾದೇವ. ಮಹಾದೇವ ಈ ದೇಶದ ಪ್ರತಿ ವಸ್ತುವಿನಲ್ಲೂ ಇದ್ದಾನೆ. ಯೋಗ ಮತ್ತು ಶಿವನಿಂದ ದೂರ ಉಳಿಯಲು ಬಯಸುವವರು ಹಿಂದೂಸ್ಥಾನವನ್ನು ತೊರೆಯಲಿ. ಈ ದೇಶದ ಬಹುಸಂಖ್ಯಾತರೇ ತನ್ನನ್ನು ಸ್ಟಾರ್ ಮಾಡಿದ್ದಾರೆ ಎನ್ನುವುದನ್ನು ಶಾರೂಖ್ ಮರೆಯಬಾರದು. ಒಂದು ವೇಳೆ ಹಿಂದೂಗಳೇನಾದರೂ ಶಾರೂಖ್ ಕೈಬಿಟ್ಟಿದ್ದರೆ ಆತ ರಸ್ತೆಯಲ್ಲಿ ಅಲೆದಾಡಬೇಕಿತ್ತು. ಹಫೀಜ್ ಸಯೀದ್ನ ಭಾಷೆಯಲ್ಲೇ ಎಸ್ಆರ್ಕೆ ಮಾತನಾಡುತ್ತಿರುವುದು ವಿಪರ್ಯಾಸ. ಆದಿತ್ಯನಾಥ್ ಆಯ್ಕೆಯು ದೇಶದ ಜಾತ್ಯ ತೀತತೆಯ ಮೇಲೆ ಈವರೆಗೆ ನಡೆದಿರದಂಥ ಅತಿದೊಡ್ಡ ಹಲ್ಲೆ. ಬಿಜೆಪಿ ಅಥವಾ ಆರೆಸ್ಸೆಸ್ ತಮ್ಮ ಹಿಂದುತ್ವವಾದವನ್ನು ಉತ್ತೇಜಿಸಲು ಈ ರೀತಿ ಮಾಡಿರಬಹುದು. ಭಾರತವು ಹಿಂದುತ್ವವಲ್ಲ, ಹಿಂದುತ್ವವು ಭಾರತವಲ್ಲ.
ವೀರಪ್ಪ ಮೊಯ್ಲಿ, ಕಾಂಗ್ರೆಸ್ ನಾಯಕ ನಾನು ಪ್ರಧಾನಿ ಮೋದಿ ಅವರ “ಸಬ್ಕಾ ಸಾಥ್ ಸಬ್ಕಾ ವಿಕಾಸ್’ ನೀತಿಯನ್ನೇ ಅನುಸರಿಸುತ್ತೇನೆ. ಇನ್ನು ನಮ್ಮ ರಾಜ್ಯವು ಅಭಿ ವೃದ್ಧಿಯ ಪಥ ದತ್ತ ಸಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.
ಯೋಗಿ ಆದಿತ್ಯನಾಥ್