Advertisement

Karnataka; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 173 ಕೋವಿಡ್ ಪ್ರಕರಣ: 2 ಸಾವು

07:55 PM Dec 29, 2023 | Team Udayavani |

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 173 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿಗೆ ಗುರಿಯಾಗಿದ್ದ ಬೆಂಗಳೂರು ನಗರದ ಇಬ್ಬರು ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಶುಕ್ರವಾರ ಸಂಜೆ ಆರೋಗ್ಯ ಇಲಾಖೆ ವರದಿ ಮಾಡಿದೆ.

Advertisement

ಶುಕ್ರವಾರ 37 ಮಂದಿ  ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು 702 ಸಕ್ರಿಯ ಸೋಂಕಿತ ಪ್ರಕರಣಗಳಿವೆ ಎಂದು ವರದಿ ತಿಳಿಸಿದೆ.

702 ಮಂದಿಯ ಪೈಕಿ 649 ಮಂದಿ ಮನೆಗಳಲ್ಲಿಯೇ ಐಸೋಲೇಶನ್ ಆಗಿದ್ದಾರೆ. 12 ಮಂದಿ ಐಸಿಯುನಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 8349 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಅತೀ ಹೆಚ್ಚು ಒಟ್ಟು 471 ಸೋಂಕಿತ ಪ್ರಕರಣಗಳು ಬೆಂಗಳೂರು ನಗರದಲ್ಲಿವೆ.ಮೈಸೂರಿನಲ್ಲಿ 46 ಸಕ್ರಿಯ ಪ್ರಕರಣಗಳಿವೆ. ಉಡುಪಿ, ಬಾಗಲಕೋಟೆ, ಹಾವೇರಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಸದ್ಯ ಯಾವುದೇ ಸಕ್ರಿಯ ಪ್ರಕರಣವಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next