Advertisement
ಕೆಲವು ಟಿಕೆಟ್ ಆಕಾಂಕ್ಷಿಗಳು ರಾಜ್ಯ ನಾಯಕರು ಹಾಗೂ ಹೈ ಕಮಾಂಡ್ ಮೇಲೆ ಪ್ರಭಾವ ಬೀರಿ ಕೊನೇ ಕ್ಷಣದಲ್ಲಿ ಟಿಕೆಟ್ ಪಡೆಯುವ ಪ್ರಯತ್ನ ನಡೆಸಿದ್ದಾರೆ. ಇನ್ನು ಕೆಲವರು ಪಕ್ಷದ ತೀರ್ಮಾನವನ್ನು ಖಂಡಿಸಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮತ್ತೆ ಹಲವರು ಪಕ್ಷ ತೊರೆದು ಬೇರೆ ಪಕ್ಷದ ಮಡಿಲು ಸೇರಿಕೊಳ್ಳುತ್ತಿದ್ದಾರೆ.
ಇಷ್ಟೊಂದು ಪ್ರಮಾಣದ ಬಂಡಾಯ ಚುನಾವಣೆ ಫಲಿತಾಂಶದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಆತಂಕ ಕಾಂಗ್ರೆಸ್ ಹೈ ಕಮಾಂಡ್ಗೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ವಂಚಿತ ಅತೃಪ್ತ ಆಕಾಂಕ್ಷಿಗಳನ್ನು ಪ್ರತ್ಯೇಕವಾಗಿ ಮಾತುಕತೆ ನಡೆಸಿ ಬಂಡಾಯ ಶಮನ ಮಾಡಲು ಹೈಕಮಾಂಡ್ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್ ಸೇರಿ ರಾಜ್ಯ ನಾಯಕರಿಗೆ ಜವಾಬ್ದಾರಿ ವಹಿಸಿದೆ. ಈಗಾಗಲೇ ಬೇರೆ ಪಕ್ಷಕ್ಕೆ ಸೇರಿರುವವರನ್ನು ಮನವೊಲಿಸಿ ವಾಪಸ್ ಕರೆತರುವಂತೆಯೂ ನಿರ್ದೇಶನ ನೀಡಲಾಗಿದೆ. ಸ್ವತ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಕೆಲವು ಅತೃಪ್ತರನ್ನು ಸಮಾಧಾನ ಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಯಾರಿಗೆ ಯಾವ ಕ್ಷೇತ್ರದ ಜವಾಬ್ದಾರಿ?