Advertisement

ಕಂಬಳ ಪರ ಮಸೂದೆ ಪಾಸ್: ಕಂಬಳ ಕ್ರೀಡೆಗೆ ರಾಜ್ಯ ಸರ್ಕಾರದ ಕಾನೂನು ಬಲ 

01:02 PM Feb 13, 2017 | Sharanya Alva |

ಬೆಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸಾಂಪ್ರದಾಯಿಕ ಕಂಬಳ ಹಾಗೂ ಉತ್ತರಕರ್ನಾಟಕದ ಎತ್ತಿನಗಾಡಿ ಓಟದ ಸ್ಪರ್ಧೆ ಕ್ರೀಡೆಗೆ ಸಂಬಂಧಿಸಿದಂತೆ  ಕೊನೆಗೂ ರಾಜ್ಯ ಸರ್ಕಾರ ಕಾನೂನಿನ ಬಲ ನೀಡಿದೆ. ಸೋಮವಾರ ವಿಧಾನಸಭೆಯಲ್ಲಿ ಕಂಬಳ ಸಂಬಂಧಿತ ವಿಧೇಯಕ ಪಾಸ್ ಆಗಿದೆ.

Advertisement

ವಿಧಾನಸಭೆಯಲ್ಲಿ ಪ್ರಾಣಿಗಳ ಮೇಲಿನ ಹಿಂಸೆ ತಡೆ ತಿದ್ದುಪಡಿ ಕಾಯ್ದೆ ಪಕ್ಷಾತೀತವಾಗಿ ಸದಸ್ಯರು ಬೆಂಬಲ ಸೂಚಿಸುವ ಮೂಲಕ ಪಾಸ್ ಆಗಿದೆ. ಈ ವಿಧೇಯಕ ಪಾಸ್ ಆಗುವ ಮೂಲಕ, ಕಂಬಳ ಹಾಗೂ ಎತ್ತಿನ ಗಾಡಿ ಓಟದ ಸ್ಪರ್ಧೆಗೆ ಕಾನೂನಿನ ಬಲ ಬಂದಂತಾಗಿದೆ.

ಕಂಬಳ ಮತ್ತು ಎತ್ತಿನ ಬಂಡಿ ಓಟಕ್ಕೆ ಕಾನೂನು ಮಾನ್ಯತೆ ದೊರಕಿಸಿ ಕೊಡಲು ಅನುವಾಗುವಂತೆ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ರಾಜ್ಯದಲ್ಲಿ ಕಂಬಳ ಮತ್ತು ಎತ್ತಿನ ಬಂಡಿ ಓಟ ನಡೆಸಲು ಅನುವಾಗುವಂತೆ ಕೇಂದ್ರ ಅಧಿನಿಯಮ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ ಕಾಯ್ದೆ-1960ಕ್ಕೆ ತಿದ್ದುಪಡಿ ತರಬೇಕಿತ್ತು, ಅದಕ್ಕಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವ (ಕರ್ನಾಟಕ ತಿದ್ದುಪಡಿ) ಮಸೂದೆ-2017ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next