Advertisement

ಪರಿಹಾರ ನೀಡದಿದ್ದರೆ ಕರ್ನಾಟಕ ಬಂದ್‌

11:04 PM Sep 01, 2019 | Team Udayavani |

ಮೈಸೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿ ಶೀಘ್ರ ಪರಿಹಾರ ನೀಡಬೇಕು. ಜೊತೆಗೆ ರಾಜ್ಯ ಸರ್ಕಾರವೂ ಪ್ರವಾಹಪೀಡಿತ ಜಿಲ್ಲೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು.

Advertisement

ಭಾನುವಾರ ನಗರದ ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿ, ಕೇಂದ್ರ-ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ, ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳು ಪ್ರವಾಹದಿಂದ ಸಂಕಷ್ಟಕ್ಕೀಡಾಗಿವೆ. ಪ್ರಧಾನಿ ನರೇಂದ್ರ ಮೋದಿ ಕೂಡಲೇ ರಾಜ್ಯಕ್ಕೆ ಭೇಟಿ ನೀಡಬೇಕು. ಸೆ.7ರಂದು ರಾಜ್ಯ ಭೇಟಿ ವೇಳೆ ಮೊದಲ ಕಂತಿನಲ್ಲಿ 50 ಸಾವಿರ ಕೋಟಿ ರೂ. ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಒಂದು ವೇಳೆ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕನ್ನಡ ಒಕ್ಕೂಟಗಳ ಪರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಪ್ರತಿ ಬಾರಿ ಕರ್ನಾಟಕದಿಂದ ನೀರು ಕೇಳುವ ತಮಿಳುನಾಡಿನಿಂದ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದಾಗ ಆರ್ಥಿಕ ನೆರವು ಕೇಳಬೇಕು ಎಂಬ ಭೈರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ಭೈರಪ್ಪನವರ ವಾದಕ್ಕೆ ಅರ್ಥವೇ ಇಲ್ಲ. ನೀರು ಹೆಚ್ಚು ಬಂದಿದೆ ಎಂದು ತಮಿಳುನಾಡು ಬಳಿ ಹಣ ಕೇಳುವುದು ಸರಿಯಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next