Advertisement

ರಾಯಚೂರು ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

12:58 PM Sep 28, 2020 | keerthan |

ರಾಯಚೂರು: ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ ರ್ಯಾಲಿಗೆ ಬಂದ್ ಸೀಮಿತಗೊಳಿಸಿದ್ದಾರೆ.  ಜನಜೀವನ ಎಂದಿನಂತಿದ್ದು ಕೆಲವೆಡೆ ಮಾತ್ರ ವರ್ತಕರು ಸ್ವಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಬಿಟ್ಟರೆ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದೆ.

Advertisement

ನಗರದ ಡಾ.ಅಂಬೇಡ್ಕರ್  ವೃತ್ತದಲ್ಲಿ ಜಮಾಯಿಸಿದ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು.

ಕಾಂಗ್ರೆಸ್ ಕಾರ್ಯಕರ್ತರು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು.  ಜೆಡಿಎಸ್ ಕಾರ್ಯಕರ್ತರು ಹೋರಾಟ ಬೆಂಬಲಿಸಿ ಪಾಲ್ಗೊಂಡಿದ್ದರು.

ಇದನ್ನೂ ಓದಿ:ಕರ್ನಾಟಕ ಬಂದ್: ರಾಮನಗರದಲ್ಲಿ ಬಂದ್ ಬಹುತೇಕ ಯಶಸ್ವಿ

ನಗರದ ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದರು. ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ನಡೆಯುತ್ತಿರುವ ಕಾರಣ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಇರಲಿಲ್ಲ. ಆದರೆ, ಉಳಿದ ವಾಹನಗಳ ಸಂಚಾರ ಎಂದಿನಂತಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next