Advertisement

ಜನವರಿ 27ಕ್ಕಲ್ಲ, 25ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್

06:06 PM Jan 11, 2018 | Sharanya Alva |

ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಜ.27 ರ ಬದಲು 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ನಡೆಸುವುದಾಗಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ತಿಳಿಸಿದ್ದಾರೆ.

Advertisement

ವಾಟಾಳ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ರಾಜ್ಯಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಜ.28 ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ  ಆಗಮಿಸುತ್ತಿರುವುದರಿಂದ ಅವರ ಮೇಲೆ ಒತ್ತಡ ಹೇರಲು ರಾಜ್ಯ ಬಂದ್‌ಗೆ ಕರೆ ನೀಡಿರುವುದಾಗಿ ವಾಟಾಳ್‌ ನಾಗರಾಜ್‌ ಹೇಳಿದ್ದರು.

ಮಹದಾಯಿ ವಿವಾದ ಮಾತುಕತೆಯ ಮೂಲಕ ಬಗೆ ಹರಿಸಲು ಪ್ರಧಾನಿ ಮಧ್ಯಪ್ರವೇಶ ಮಾಡಬೇಕು. ಕುಡಿಯುವ ನೀರಿನ ವಿಷಯದಲ್ಲಿ ಅನಗತ್ಯ ರಾಜಕೀಯ

ಮಾಡುವುದರಿಂದ ಉತ್ತರ ಕರ್ನಾಟಕ ಭಾಗದ ಜನತೆಗೆ ನಿರಂತರ ಅನ್ಯಾಯವಾಗುತ್ತಿದೆ ಎಂದರು.ಇದೀಗ  ಜ. 25 ರ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ಸಂಪೂರ್ಣ ಕರ್ನಾಟಕ ಬಂದ್‌ ಇರಲಿದೆ. ರಾಜ್ಯದ ಹಿತದೃಷ್ಠಿಯಿಂದ ಸಾರ್ವಜನಿಕರು ಬಂದ್‌ಗೆ ಬೆಂಬಲಿಸಬೇಕು ಎಂದು ವಾಟಾಳ್‌ ಮನವಿ ಮಾಡಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಕೂಡ ಕರ್ನಾಟಕ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next