Advertisement

ಕರ್ನಾಟಕ ಬಂದ್‌ ಬಿಸಿ: ಪ್ರಯಾಣಿಕರ ಪರದಾಟ

07:57 AM Jan 25, 2018 | |

ಬೆಂಗಳೂರು: ಮಹಾದಾಯಿ ನದಿ ನೀರಿನ ಸಮಸ್ಯೆ ವಿಚಾರವಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ವಿವಿಧ ಒಕ್ಕೂಟಗಳು ಕರೆ ನೀಡಿರುವ ಕರ್ನಾಟಕ ರಾಜ್ಯ ಬಂದ್‌ಗೆ ರಾಜಧಾನಿ ಬೆಂಗಳೂರಿನಲ್ಲಿ ಕರವೇ ಸಂಘಟನೆಯವರು ಬಿದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಕರವೇ ಸಂಘಟನೆಯ ಕಾರ್ಯಕರ್ತರು ಮೆಜೆಸ್ಟಿಕ್‌ ರೈಲ್ವೇ ನಿಲ್ದಾಣದಲ್ಲಿ ಬೆಳ್ಳಂಬೆಳಿಯೇ ರೈಲು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಮುಂದಾದ ಕೆಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಇನ್ನೂ ಬಂದ್‌ ಹಿನ್ನಲೆಯಲ್ಲಿ ಬಿಎಂಟಿಸಿ ಸ್ಥಗಿತಗೊಂಡಿದ್ದು ಪ್ರಯಾಣಿಕರು ಪರದಾಡುವಂತಾಗಿದೆ. 

ರಾಜ್ಯದ ಹಲವೆಡೆ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗಿನ ಜಾವವೇ  ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಕೇಂದ್ರ ಸರಕಾರದ ವಿರುದ್ದ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
 

Advertisement

Udayavani is now on Telegram. Click here to join our channel and stay updated with the latest news.

Next