Advertisement
ಶನಿವಾರ ಕನ್ನಡಪರ ಸಂಘಟನೆಗಳ ಒಕ್ಕೂಟದ ಸಭೆಯ ನಂತರ ಮಾತನಾಡಿದ ವಾಟಾಳ್ ನಾಗರಾಜ್, ಯಾವುದೇ ಕಾರಣಕ್ಕೂ ಕಾವೇರಿ ನೀರು ನಿರ್ವಹಣೆ ಮಂಡಳಿ ರಚನೆ ಆಗಬಾರದು. ಮಂಡಳಿ ರಚನೆ ಆದರೆ ರಾಜ್ಯಕ್ಕೆ ಭಾರಿ ನಷ್ಟವಾಗಲಿದೆ. ಕುಡಿಯುವ ನೀರಿಗೂ ಮಂಡಳಿಯ ಮುಂದೆ ಅಲೆಯಬೇಕಾಗುವ ಪರಿಸ್ಥಿತಿ ಎದುರಾಗಲಿದೆ. ಹೀಗಾಗಿ ತಮಿಳು ನಾಡಿನ ಧೋರಣೆಯನ್ನು ಖಂಡಿಸಿ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದು ಹೇಳಿದರು.
Related Articles
ನಾಯಕರು ಬಂದ್ಗೆ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
Advertisement
ಇದಕ್ಕೂ ಮುನ್ನ ಕನ್ನಡಪರ ಸಂಘಟನೆಗಳ ಮುಖಂಡರು ನಗರದ ಖಾಸಗಿ ಹೋಟೆಲ್ನಲ್ಲಿ ಪೂರ್ವಭಾವಿ ಸಭೆ ನಡೆಸಿ ಬಂದ್ ಪೂರ್ವಭಾವಿ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು, ಕೆ.ಆರ್.ಕುಮಾರ್, ಎಚ್.ವಿ.ಗಿರೀಶ್ ಗೌಡ,ಮಂಜುನಾಥ್ದೇವ್ ಪಾಲ್ಗೊಂಡಿದ್ದರು.
ಕಾವೇರಿ ನೀರು ನಿರ್ವಹಣಾ ಮಂಡಳಿ ಬೇಡವೆಂದು ಒತ್ತಾಯಿಸಿ ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ಗೆ ಕನ್ನಡ ಚಿತ್ರರಂಗ ಕೂಡ ಬೆಂಬಲ ನೀಡಿದೆ. ಅಂದು ಯಾವುದೇ ಚಿತ್ರಗಳು ಪ್ರದರ್ಶನಗೊಳ್ಳುವುದಿಲ್ಲ. ತಮ್ಮ ರಾಜಕೀಯ ಲಾಭಕ್ಕಾಗಿ ಚಿತ್ರ ನಟ ರಜನಿಕಾಂತ್ ಮತ್ತು ಕಮಲ್ ಹಾಸನ್ ಕಾವೇರಿ ಕ್ಯಾತೆ ತೆಗೆದಿದ್ದಾರೆ. ಅವರ ಚಿತ್ರಗಳನ್ನು ಕನ್ನಡಿಗರು ಬಹಿಷ್ಕರಿಸಬೇಕು. – ವಾಟಾಳ್ ನಾಗರಾಜ್