Advertisement

ಕರ್ನಾಟಕ ಬಂದ್: ಮಂಗಳೂರಿನಲ್ಲಿ‌ ನೀರಸ ಪ್ರತಿಕ್ರಿಯೆ, ಬಸ್ ಸಂಚಾರ ಆರಂಭ

11:12 AM Sep 28, 2020 | keerthan |

ಮಂಗಳೂರು: ರೈತ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರಾವಳಿ ಜಿಲ್ಲೆಗಳಲ್ಲೂ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದರೂ, ಬಸ್ ಸಂಚಾರ ಎಂದಿನಂತೆ ಕಾರ್ಯಾರಂಭಿಸಿದೆ.

Advertisement

ಮಂಗಳೂರಿನಲ್ಲಿ‌ ರಾಜ್ಯ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಆಟೋ, ಬಸ್ ಸಂಚಾರ ಆರಂಭವಾಗಿದೆ. ಜನಜೀವನವೂ ಸಹಜ ಸ್ಥಿತಿಯಲ್ಲಿದೆ.

ಮಂಗಳೂರಿನಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಗಳ ಓಡಾಟ ಎಂದಿನಂತಿದೆ. ಜನರು ಕೂಡಾ ಸಹಜ ರೀತಿಯಲ್ಲಿ ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು, ಬಂದ್ ನ ಯಾವುದೇ ಬಿಸಿ ನಗರದಲ್ಲಿ ಬೆಳಿಗ್ಗೆ ಕಂಡು ಬಂದಿಲ್ಲ.

ರೈತ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ ನಡೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ನಗರದಲ್ಲಿ ಗಸ್ತು ಆರಂಭಿಸಿದ್ದಾರೆ.

Advertisement

ಇದನ್ನೂ ಓದಿ:ರೈತರ ಕರೆಗಿಂದು ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಬೆಂಗಳೂರಿನಲ್ಲಿ ರೈಲು ತಡೆಯತ್ನ

Advertisement

Udayavani is now on Telegram. Click here to join our channel and stay updated with the latest news.

Next