Advertisement

C.P.Yogeshwar ಕಾಂಗ್ರೆಸ್ ಸೇರ್ಪಡೆ ಖಚಿತ: ಸಿದ್ದರಾಮಯ್ಯ ಭೇಟಿಯಾಗಿ ಮಹತ್ವದ ಮಾತುಕತೆ

10:30 AM Oct 23, 2024 | Team Udayavani |

ಬೆಂಗಳೂರು:ಭಾರೀ ಕೂತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣದ ಉಪಚುನಾವಣೆಯ ರಾಜಕೀಯದ ವಿಚಾರದಲ್ಲಿ, ಸಿ.ಪಿ.ಯೋಗೇಶ್ವರ್ ಅವರ ವಿಚಾರದಲ್ಲಿ ಇದ್ದ ಕೂತೂಹಲಕ್ಕೆ ಬುಧವಾರ (ಅ23) ರಂದು ತೆರೆ ಬಿದ್ದಿದೆ. ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ.

Advertisement

ಸದಾಶಿವ ನಗರದ ಉಪಮುಖ್ಯಮಂತ್ರಿ ಡಿ.ಕೆ.. ಶಿವಕುಮಾರ್ ಅವರ ನಿವಾಸದಲ್ಲಿ ಕಾಂಗ್ರೆಸ್ ಪ್ರಮುಖರೊಂದಿಗೆ ಮಾತುಕತೆ ನಡೆಸಿದ ಬಳಿಕ ಡಿಕೆಶಿ ಅವರೊಂದಿಗೆ ಯೋಗೇಶ್ವರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಾಲಿಗೆರಗಿ ಆಶೀರ್ವಾದ ಪಡೆದರು. ಅಚ್ಚರಿ ಎಂಬಂತೆ ಯೋಗೇಶ್ವರ್ ಅವರು ಚನ್ನಪಟ್ಟಣದ ಕೆ ಅಭ್ಯರ್ಥಿಯಾಗುವುದು ಖಚಿತವಾಗಿದ್ದು, ಜೆಡಿಎಸ್ ಅಭ್ಯರ್ಥಿಯ ವಿರುದ್ಧ ಜಿದ್ದಾ ಜಿದ್ದಿನ ನೇರ ಸ್ಪರ್ಧೆ ನಿರೀಕ್ಷಿಸಲಾಗಿದೆ.

ಉಪಚುನಾವಣೆಗೆ ಯೋಗೇಶ್ವರ್‌ ಅವರನ್ನು ಜೆಡಿಎಸ್‌ನಿಂದ ಕಣಕ್ಕಿಳಿಸುವ ಸಾಧ್ಯತೆಯ ಕುರಿತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ತಮಗೆ ಕರೆ ಮಾಡಿದ್ದರು ಎಂದು ಜೆಡಿಎಸ್‌ ಮುಖಂಡ ಹೆಚ್‌ಡಿ ಕುಮಾರಸ್ವಾಮಿ ಪಕ್ಷದ ಸದಸ್ಯರಿಗೆ ಹೇಳಿದ ಬೆನ್ನಲ್ಲೇ, ಪಕ್ಷೇತರನಾಗಿ ಕಣಕ್ಕಿಳಿಯಲು ಯೋಗೇಶ್ವರ್ ಮುಂದಾದ ಬೆನ್ನಲ್ಲೇ, ಸಮಾಜವಾದಿ ಪಕ್ಷದ ಮುಖಂಡರು ಬಿ ಫಾರ್ಮ್ ನೀಡಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ.

ಈಗಾಗಲೇ ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಯೋಗೇಶ್ವರ್  ಬಿಜೆಪಿ ಪ್ರಾಥಮಿಕ ಸದಸ್ಯತವಕ್ಕೂ ರಾಜೀನಾಮೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next