Advertisement

‘ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್’ ಮರುನಾಮಕರಣಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹ ?

02:11 PM Sep 02, 2021 | Team Udayavani |

ಬೆಂಗಳೂರು: ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ( ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ) ಮರುನಾಮಕರಣಕ್ಕೆ ಒತ್ತಾಯಿಸಿ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ ಎಂದು ವರದಿಗಳು ತಿಳಿಸಿವೆ.

Advertisement

ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‍ ಬದಲಿಗೆ ಫೀಲ್ಡ್ ಮಾರ್ಷಲ್ ಕೆ.ಕಾರಿಯಪ್ಪ ಅವರು ಹೆಸರು ಇಡುವಂತೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.

ನಿನ್ನೆಯಷ್ಟೆ ಹಿಮಾಂತ ಬಿಸ್ವಾ ಶರ್ಮಾ ನೇತೃತ್ವದ ಅಸ್ಸಾಂ ಕ್ಯಾಬಿನೆಟ್ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ್ನು (ಅಸ್ಸಾಂ ರಾಜ್ಯದಲ್ಲಿರುವ)  ಒರಾಂಗ್ ರಾಷ್ಟ್ರೀಯ ಉದ್ಯಾನವನ ಎಂದು ಮರುನಾಮಕರಣ ಮಾಡಲು ನಿರ್ಧರಿಸಿದೆ. ಈ ಬೆಳವಣೆಗೆಯ ಬೆನ್ನಲ್ಲೆ ಕರ್ನಾಟಕದಲ್ಲಿರುವ  ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್‍  (ನಾಗರಹೊಳೆ ರಾಷ್ಟ್ರೀಯ ಉದ್ಯಾನವನ  ) ಮರುನಾಮಕರಣದ ಕೂಗು ಕೇಳಿ ಬಂದಿದೆ.

ಇನ್ನು ಕೆಲ ದಿನಗಳಿಂದ  ರಾಜ್ಯದಲ್ಲಿರುವ ‘ಇಂದಿರಾ ಕ್ಯಾಂಟೀನ್’ ಮರುನಾಮಕರಣ ಕೂಗು ಕೇಳಿ ಬರುತ್ತಿದೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಇಂದಿರಾ ಕ್ಯಾಂಟೀನ್ ಮರುನಾಮಕರಣಕ್ಕೆ ಒತ್ತಾಯಿಸಿದ್ದರು. ಈ ಬೇಡಿಕೆಗೆ ಪ್ರತಿಪಕ್ಷ ಕಾಂಗ್ರೆಸ್‍ ನಾಯಕರಿಂದ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next