Advertisement

Karnataka Budget 2022: ಸಿಎಂ ಚೊಚ್ಚಲ ಬಜೆಟ್ ನಲ್ಲೇ ತವರು ಜಿಲ್ಲೆಗೆ ಬಂಪರ್ ಕೊಡುಗೆ ಘೋಷಣೆ

04:12 PM Mar 04, 2022 | Team Udayavani |

ಬೆಂಗಳೂರು: ಮುಖ್ಯಮಂತ್ರಿಗಾದಿಗೆ ಏರಿದ್ದ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ (ಮಾರ್ಚ್ 04) ಮಂಡಿಸಿದ್ದ ಮುಂದಿನ ವರ್ಷದ ತಮ್ಮ ಚೊಚ್ಚಲ ಬಜೆಟ್ ನಲ್ಲಿ ತವರು ಜಿಲ್ಲೆ ಹಾವೇರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದ್ದಾರೆ.

Advertisement

ಹಾವೇರಿ ಜಿಲ್ಲೆಗೆ 15 ಕಾರ್ಯಕ್ರಮಗಳ ಘೋಷಣೆ ಮಾಡಿದ ಸಿಎಂ

* ಹಿರೇಕೆರೂರಿನಲ್ಲಿ ಗೋವಿನ ಜೋಳ ಸಂಶೋಧನಾ ಕೇಂದ್ರ

* ಹಾನಗಲ್ ನಲ್ಲಿ ಮಾವು ಸಂಸ್ಕರಣಾ ಘಟಕ

* ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆ

Advertisement

* ಕಾಲೇಜುಗಳ ಮೇಲ್ವಿಚಾರಣೆ ಸುಧಾರಣೆಗೆ ಹಾವೇರಿ ಸೇರಿ ಏಳು ಜಿಲ್ಲೆಗಳಲ್ಲಿ ವಿನೂತನ ಮಾದರಿಯ ವಿವಿ ಸ್ಥಾಪನೆ.

* ಹಾವೇರಿ ಸೇರಿ ನಾಲ್ಕು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಹೆಸರಿನ ಸಂಚಾರಿ ಕ್ಲಿನಿಕ್

* ಶಿಗ್ಗಾಂವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ 250 ಹಾಸಿಗೆಗಳಿಗೆ ಮೇಲ್ದರ್ಜೆಗೆ

* ಸವಣೂರು ತಾಲ್ಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ

* ಚರ್ಮ ಕುಶಲಕರ್ಮಿಗಳಿಗೆ ಹಾವೇರಿಯಲ್ಲಿ ಸಾಮಾನ್ಯ ಸೌಲಭ್ಯ ಸಮುಚ್ಛಯ ಸ್ಥಾಪನೆ

* ಶಿಗ್ಗಾಂವಿಯ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಏರೋಸ್ಪೇಸ್, ಇಂಜಿನಿಯರಿಂಗ್, ಇಂಡಸ್ಟ್ರಿಯಲ್ ಆಟೋಮೇಷನ್, ಎಲೆಕ್ಟ್ರಾನಿಕ್ ಕ್ಷೇತ್ರಗಳ ತರಬೇತುದಾರರಿಗೆ ತರಬೇತಿ ಕೇಂದ್ರ

* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರುಗಳಿಗೆ ಹೊಸ ರೈಲು ಮಾರ್ಗ ಯೋಜನೆ

* ಹಾವೇರಿಯಲ್ಲಿ ಕೈಗಾರಿಕೆ ಸ್ಥಾಪಿಸಲು ಉತ್ತೇಜನ

* ರಾಣೆಬೆನ್ನೂರಿನಲ್ಲಿ ನೂತನ‌ ಜವಳಿ ಪಾರ್ಕ್.

* ಹಾವೇರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ. 20 ಕೋಟಿ ರೂ ನಿಗದಿ

* ಹಾವೇರಿಯಲ್ಲಿ ಡಾ.ಮಹಾದೇವ ಬಣಕಾರರ ಸಾಂಸ್ಕೃತಿಕ ಭವನ, 2 ಕೋಟಿ ರೂ

* ಶಿಗ್ಗಾಂವಿಯಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ, 28 ಕೋಟಿ ರೂ

Advertisement

Udayavani is now on Telegram. Click here to join our channel and stay updated with the latest news.

Next