Advertisement

Karnataka Budget: ಮದ್ಯಪ್ರಿಯರಿಗೆ ಶಾಕ್ ನೀಡಿದ ಸಿದ್ದು ಸರ್ಕಾರ; ಅಬಕಾರಿ ತೆರಿಗೆ ಹೆಚ್ಚಳ

01:14 PM Jul 07, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ರಾಜ್ಯ ಆಯವ್ಯಯ ಪತ್ರ ಮಂಡಿಸಿದರು. ದಾಖಲೆಯ 14ನೇ ಬಜೆಟ್ ಓದಿದ ಸಿದ್ದರಾಮಯ್ಯ ಅವರು ಬೊಕ್ಕಸ ಹೆಚ್ಚಳಕ್ಕಾಗಿ ಮದ್ಯಪ್ರಿಯರಿಗೆ ಶಾಕ್ ನೀಡಿದ್ದಾರೆ.

Advertisement

ನಿರೀಕ್ಷೆಯಂತೆ ಅಬಕಾರಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಬಕಾರಿ ತೆರಿಗೆಯನ್ನು ಶೇಕಡಾ 20ರಷ್ಟು ಹೆಚ್ಚು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದನ್ನೂ ಓದಿ:Karnataka Budget Live: ಸಿಎಂ ಸಿದ್ದು ದಾಖಲೆಯ 14ನೇ ಬಜೆಟ್‌ ಮಂಡನೆ ಆರಂಭ…

ಇದೇ ವೇಳೆ ಬಿಯರ್ ದರವನ್ನು ಶೇಕಡಾ ಹತ್ತರಷ್ಟು ಹೆಚ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಿರುವ ಸಿದ್ದರಾಮಯ್ಯ ಸರ್ಕಾರವು ಅಬಕಾರಿ ಇಲಾಖೆಗೆ 36 ಸಾವಿರ ಕೋಟಿ ರೂ ಆದಾಯ ಟಾರ್ಗೆಟ್ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next