Advertisement

Karnataka: ಬಜೆಟ್‌ ತಯಾರಿ: ಇಂದು ಸಿಎಂ ಸಭೆ

11:11 AM Jan 30, 2024 | Team Udayavani |

ಬೆಂಗಳೂರು: ಫೆಬ್ರವರಿ 16ರಂದು ರಾಜ್ಯ ಬಜೆಟ್‌ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ವಿವಿಧ ಇಲಾಖೆಗಳೊಂದಿಗೆ ಇಡೀ ದಿನ ಸರಣಿ ಸಭೆಗಳನ್ನು ನಡೆಸಲಿದ್ದಾರೆ.
ಶನಿವಾರ ಮಧ್ಯಾಹ್ನ 12ರಿಂದ ರಾತ್ರಿ 8 ಗಂಟೆಯವರೆಗೆ ನಿರಂತರವಾಗಿ ಸಭೆಗಳನ್ನು ಆಯೋಜಿಸಿದ್ದು, ಸುಮಾರು 14 ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

Advertisement

ಪ್ರಮುಖವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ತೋಟಗಾರಿಕೆ, ಗಣಿ ಮತ್ತು ಭೂವಿಜ್ಞಾನ, ರೇಷ್ಮೆ ಮತ್ತು ಪಶುಸಂಗೋಪನೆ, ಯೋಜನೆ, ಉನ್ನತ ಶಿಕ್ಷಣ, ಬೆಂಗಳೂರು ಅಭಿವೃದ್ಧಿ, ಜಲಸಂಪನ್ಮೂಲ, ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಮತ್ತು ಕೃಷಿ ಮಾರುಕಟ್ಟೆ ಹಾಗೂ ಸಹಕಾರ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ.

2023-24ನೇ ಸಾಲಿನ ಬಜೆಟ್‌ನಲ್ಲಿ ನೀಡಿದ್ದ ತೆರಿಗೆ ಸಂಗ್ರಹಣೆ ಗುರಿ ಎಷ್ಟಾಗಿದೆ? ಬೊಕ್ಕಸದ ಪರಿಸ್ಥಿತಿ ಏನಿದೆ? ಹಣಕಾಸು ವರ್ಷಾಂತ್ಯವಾದ ಮಾರ್ಚ್‌ ಒಳಗಾಗಿ ಎಷ್ಟು ತೆರಿಗೆ ಸಂಗ್ರಹ ಆಗಬಹುದು? 5 ಗ್ಯಾರಂಟಿಗಳಿಗೆ ಮುಂದಿನ ವರ್ಷದಿಂದ ಹಣ ಹೊಂದಿಸುವುದು ಹೇಗೆ? ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲು ಅವಕಾಶಗಳಿವೆಯೇ ಎಂಬಿತ್ಯಾದಿ ಮಾಹಿತಿಗಳನ್ನು ಸಂಗ್ರಹಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next