Advertisement

ಉಪ ಸಮರದ ಪ್ರಮುಖ ಹೈಲೈಟ್ಸ್: 2 ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ

07:52 AM Apr 13, 2017 | Sharanya Alva |

ಮೈಸೂರು: ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಂಜನಗೂಡುಹಾಗೂ ಗುಂಡ್ಲುಪೇಟೆ ಉಪ ಚುನಾವಣೆಗಳ ಫಲಿತಾಂಶ ಹೊರಬಿದ್ದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ಪ್ರತಿಷ್ಠೆಯ ಕಣವಾಗಿದ್ದ ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಜಯ ಸಾಧಿಸಿದ್ದು, ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಪರಾಭವಗೊಂಡಿದ್ದಾರೆ.

Advertisement

ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹದೇವಪ್ರಸಾದ್ ಗೆಲುವಿನ ನಗು ಬೀರಿದ್ದರೆ, ಬಿಜೆಪಿಯ ನಿರಂಜನ್ ಸೋಲಿನ ರುಚಿ ಕಂಡಿದ್ದಾರೆ. ನಂಜನಗೂಡು ಕ್ಷೇತ್ರದ ಮತ ಎಣಿಕೆ ನಂಜನಗೂಡು ತಾಲೂಕಿನ ದೇವೀರಮ್ಮನ ಹಳ್ಳಿ ಗೇಟ್‌ ಬಳಿ ಇರುವ ಜೆಎಸ್‌ಎಸ್‌ ಪ್ರಥಮ ದರ್ಜೆ ಕಾಲೇಜಿನಲ್ಲಿ, ಗುಂಡ್ಲುಪೇಟೆ ಕ್ಷೇತ್ರದ ಮತ ಎಣಿಕೆ ಗುಂಡ್ಲು ಪೇಟೆಯ ಸೇಂಟ್‌ ಜಾನ್ಸ್‌ ಆಂಗ್ಲ ಮಾಧ್ಯಮ ಶಾಲೆ ಕಟ್ಟಡದಲ್ಲಿ ನಡೆದಿತ್ತು. ಫಲಿತಾಂಶದ ಹೈಲೈಟ್ಸ್ ಇಲ್ಲಿದೆ…

Advertisement

Udayavani is now on Telegram. Click here to join our channel and stay updated with the latest news.

Next