Advertisement

ಉಪಚುನಾವಣೆ ಮುಹೂರ್ತ ಫಿಕ್ಸ್; ಏ.9ರಂದು ಮತದಾನ, 13ಕ್ಕೆ ರಿಸಲ್ಟ್

03:49 PM Mar 09, 2017 | Team Udayavani |

ಬೆಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಮಹದೇವಪ್ರಸಾದ್ ನಿಧನದಿಂದ ತೆರವಾದ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಮೂಲಕ ತೆರವಾದ ನಂಜನಗೂಡು ಕ್ಷೇತ್ರಕ್ಕೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ.

Advertisement

ಕೇಂದ್ರ ಚುನಾವಣಾ ಆಯೋಗ ಗುರುವಾರ 2 ಕ್ಷೇತ್ರಗಳ ಉಪಚುನಾವಣೆಯ ದಿನಾಂಕ ಘೋಷಿಸಿದೆ. ಏಪ್ರಿಲ್ 9ರಂದು ಮತದಾನ ನಡೆಯಲಿದ್ದು, ಏ.13ರಂದು ಫಲಿತಾಂಶ ಪ್ರಕಟವಾಗಲಿದೆ.

ತೀವ್ರ ಹೃದಯಾಘಾತದಿಂದ ಸಚಿವ ಮಹದೇವಪ್ರಸಾದ್ ಅವರು ಇತ್ತೀಚೆಗೆ ನಿಧನ ಹೊಂದಿದ್ದರು. ನಂಜನಗೂಡು ಕ್ಷೇತ್ರದ ಶ್ರೀನಿವಾಸ್ ಪ್ರಸಾದ್ ಅಸಮಾಧಾನದಿಂದ ಕಾಂಗ್ರೆಸ್ ಪಕ್ಷ ತೊರೆದಿದ್ದರು. ಈ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಮತ್ತು ನಂಜನಗೂಡು ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವಂತಾಗಿದೆ.

ಮಾರ್ಚ್ 14ರಂದು ನಾಮಪತ್ರ ಸಲ್ಲಿಕೆ ಆರಂಭ
ಮಾರ್ಚ್ 22ರಂದು ನಾಮಪತ್ರ ಪರಿಶೀಲನೆ
ಮಾರ್ಚ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ
ಏಪ್ರಿಲ್ 9ರಂದು ಮತದಾನ
ಏಪ್ರಿಲ್ 13ರಂದು ಫಲಿತಾಂಶ ಪ್ರಕಟ

Advertisement

Udayavani is now on Telegram. Click here to join our channel and stay updated with the latest news.

Next