Advertisement

ಮಹದಾಯಿ ಹೋರಾಟ; ಸೂಕ್ತ ತೀರ್ಮಾನ ಕೈಗೊಳ್ಳೋಣ; ಸರ್ವಪಕ್ಷ ಸಭೇಲಿ ಸಿಎಂ

12:50 PM Aug 14, 2017 | Sharanya Alva |

ಬೆಂಗಳೂರು: ಮಹದಾಯಿ ಹೋರಾಟ ಆರಂಭವಾಗಿ 2 ವರ್ಷ ಕಳೆದಿದೆ. ಏತನ್ಮಧ್ಯೆ ನ್ಯಾಯಮಂಡಳಿಯಲ್ಲಿ ವಿಚಾರಣೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಮುಂದಿನ ಆದೇಶದ ಬಗ್ಗೆ ಹೋರಾಟಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ ಸಭೆಯಲ್ಲಿ  ಸೂಕ್ತ ತೀರ್ಮಾನ ಕೈಗೊಳ್ಳೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

 ಕಳಸಾ ಬಂಡೂರಿ ಯೋಜನೆ, ಮಹದಾಯಿ ನದಿ ನೀರು ಹಂಚಿಕೆ, ರಾಜ್ಯ ವಿಪತ್ತು ಪರಿಹಾರ ನಿಧಿ ಹಂಚಿಕೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ಸರ್ವಪಕ್ಷ ಸಭೆ ನಡೆಯಿತು.

ಮಹದಾಯಿ ಹೋರಾಟ ಆರಂಭವಾಗಿ 2 ವರ್ಷ ಕಳೆದಿದೆ. ಈ ಬಗ್ಗೆ ಸಭೆ ಕರೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಿ ಎಂದು ರೈತ ಸಂಘಟನೆಗಳ ಮುಖಂಡರು, ಹೋರಾಟಗಾರರು ಒತ್ತಾಯಿ ಸಿದ್ದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ.

ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ನ್ಯಾಯ ಮಂಡಳಿ ಸಲಹೆ ನೀಡಿದ ನಂತರದ ಬೆಳವಣಿಗೆಗಳನ್ನು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next