Advertisement

ಟಿಪ್ಪು ವಿರುದ್ಧ ಹೇಳಿಕೆ; ಸಚಿವ ಹೆಗಡೆ, ಸಿಟಿ ರವಿ ವಿರುದ್ಧ ದೂರು

06:07 PM Oct 24, 2017 | Team Udayavani |

ಬೆಂಗಳೂರು:ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಹಾಗೂ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ದೂರು ದಾಖಲಾಗಿದೆ.

Advertisement

ಇಂದಿರಾನಗರ ಠಾಣೆಯಲ್ಲಿ ಇಬ್ಬರು ನಾಯಕರ ವಿರುದ್ಧ ದೂರು ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆಲಂ ಪಾಷಾ ಎಂಬವರು 10ನೇ ಎಸಿಎಂಎಂ ಕೋರ್ಟ್ ಗೆ ಖಾಸಗಿ ದೂರು ದಾಖಲಿಸಿದ್ದಾರೆ.

ಟಿಪ್ಪು ಸುಲ್ತಾನ್ ನಾಡದ್ರೋಹಿ, ಕೊಲೆಗಡುಕ ಎಂದು ಅವಹೇಳನಕಾರಿ ಹೇಳಿಕೆ ನೀಡಿದ್ದ ಅನಂತಕುಮಾರ್ ಹೆಗಡೆ ಹಾಗೂ ಸಿಟಿ ರವಿ ವಿರುದ್ಧ ಎಫ್ಐಆರ್ ದಾಖಲಿಸಲು ಇಂದಿರಾನಗರ ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ದೂರು ಸಲ್ಲಿಸಿದ್ದಾರೆ. ಅಕ್ಟೋಬರ್ 31ರಂದು ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ ಎಂದು ಮಾಧ್ಯಮದ ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next