Advertisement

ಬಿಎಸ್‌ವೈಗೆ ಚಪ್ಪಾಳೆ ಗೌರವ; ಎದ್ದು ನಿಂತು ಗೌರವಿಸುವಂತೆ ಪ್ರಧಾನಿ ಮೋದಿಯಿಂದಲೇ ಸೂಚನೆ

10:06 AM Dec 12, 2019 | Sriram |

ನವದೆಹಲಿ: ಕರ್ನಾಟಕದ 15 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಬುಧವಾರ ನವದೆಹಲಿಯಲ್ಲಿ ನಡೆದ ಪಕ್ಷದ ಸಂಸದೀಯ ಸಭೆಯಲ್ಲಿ ತುಂಬು ಹೃದಯದ ಅಭಿನಂದನೆ ಸಲ್ಲಿಸಲಾಗಿದೆ.

Advertisement

ಕರ್ನಾಟಕದ ಲೋಕಸಭಾ ಸದಸ್ಯರು ಸೇರಿದಂತೆ ಎಲ್ಲರೂ ಕೂಡ ಯಡಿಯೂರಪ್ಪ ಅವರ ಸಾಧನೆಗೆ ಎದ್ದು ನಿಂತು ಅಭಿನಂದನೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರೇ ಖುದ್ದಾಗಿ, ಎಲ್ಲರೂ ಎದ್ದು ನಿಂತು ಬಿಎಸ್‌ವೈಗೆ ಗೌರವ ಸಲ್ಲಿಸುವಂತೆ ಸೂಚಿಸಿದ್ದು ವಿಶೇಷ.

ಸಭೆಯಲ್ಲಿನ ಅಂಶಗಳ ಬಗ್ಗೆ ವಿವರಣೆ ನೀಡಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಈ ವಿಚಾರ ತಿಳಿಸಿದ್ದಾರೆ. ಬಿಜೆಪಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕದ ಉಪಚುನಾವಣೆಯಲ್ಲಿನ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಮತದಾರರಿಗೂ ಕೃತಜ್ಞತೆ ಸಲ್ಲಿಸಿದರು ಎಂದರು.

ಎಲ್ಲದಕ್ಕಿಂತ ಮೊದಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಎರಡನೇ ಅವಧಿಯಲ್ಲಿನ ಆರು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next