Advertisement

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರು ಗಾಳ ಹಾಕ್ತಾರೆ:BJPಗೆ ಸಿಎಂ

05:48 PM Aug 11, 2017 | Team Udayavani |

ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಕ್ಷದ ಯಾವ ಶಾಸಕರು ಬಿಜೆಪಿಗೆ ಸೇರುವುದಿಲ್ಲ. ಬಿಜೆಪಿಯ ಕೆಲವರು ಕಾಂಗ್ರೆಸ್ ಸೇರಲು ತಯಾರಾಗಿದ್ದರು. ಆದರೆ ನಾವೇ ಬೇಡವೆಂದು ಸುಮ್ಮನಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನಗೊಂಡಿರುವ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ವರದಿ ಕುರಿತು ಚಿಕ್ಕಬಳ್ಳಾಪುರಕ್ಕೆ ಶುಕ್ರವಾರ ಆಗಮಿಸಿದ್ದ ಸಿದ್ದರಾಮಯ್ಯ ಅವರ ಬಳಿ ಸುದ್ದಿಗಾರರು ಪ್ರಶ್ನಿಸಿದಾಗ ಈ ಪ್ರತಿಕ್ರಿಯೆ ನೀಡಿದ್ದಾರೆ.

ಆಪರೇಷನ್ ಕಮಲದಲ್ಲಿ ನಂಬಿಕೆ ಇಲ್ಲ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದವರು ಗಾಳ ಹಾಕುತ್ತಾರೆ. ಅದಕ್ಕಾಗಿ ಬಿಜೆಪಿಯವರು ಬೇರೆ ಪಕ್ಷದವರಿಗೆ ಆಮೀಷವೊಡ್ಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡುವುದಿಲ್ಲ. ಜನರಲ್ಲಿ ವಿಶ್ವಾಸ ಇಟ್ಟು ನಾವು ಕೆಲಸ ಮಾಡುತ್ತಿದ್ದೇವೆ.

Advertisement

Udayavani is now on Telegram. Click here to join our channel and stay updated with the latest news.

Next