Advertisement
ರೈತರ ಸಾಲ ಮನ್ನಾ ಸೇರಿ ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ ಸಂಸದರಿಗೆ ಐ ಫೋನ್ “ಗಿಫ್ಟ್’ ನೀಡುವ ಔಚಿತ್ಯವಾದರೂ ಏನು ಎಂದು ಬಿಜೆಪಿ ಸಂಸದರು ಪ್ರಶ್ನಿಸಿದ್ದಾರೆ. ಐ ಫೋನ್ ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ, ಐ ಫೋನ್ ಬಗ್ಗೆ ಮಾಹಿತಿ ಇಲ್ಲ. ನಮ್ಮ ಕಚೇರಿಯಿಂದ ಕೊಡಲು ನಾನಂತೂ ಸೂಚನೆ ಕೊಟ್ಟಿಲ್ಲ. ನನ್ನ ಗಮನಕ್ಕೂ ಬಂದಿಲ್ಲ. ಅಧಿಕೃತವಾಗಿ ಕೊಡಲಾಗಿ ದೆಯೋ ಅಥವಾ ಅನಧಿಕೃತವಾಗಿ ಕೊಟ್ಟಿರುವುದೋ ಗೊತ್ತಿಲ್ಲ ಎಂದಿದ್ದಾರೆ.
ಮಾಹಿತಿಯುಳ್ಳ ಕಿಟ್ ನೀಡಲಾಗಿದೆ. ಅದರಲ್ಲಿ ಆ್ಯಪಲ್ ಐಫೋನ್ ಸಹ ಹಾಕಿ ಕೊಡಲಾಗಿದೆ. ಕೇಂದ್ರ ಸಚಿವ ಅನಂತಕುಮಾರ್ ಐ ಫೋನ್
ಪಡೆ ಯುವುದಿಲ್ಲ ಎಂದು ಹೇಳಿದ್ದಾರೆ. ಹಲವು ಬಿಜೆಪಿ ಸಂಸದರು ಇದೇ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಬಿಜೆಪಿ ರಾಜ್ಯಸಭೆ ಸದಸ್ಯ ರಾಜೀವ್ ಚಂದ್ರಶೇಖರ್ ಅವರಂತೂ ನೇರವಾಗಿಯೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಪತ್ರ ಬರೆದು ಐಫೋನ್ ಔಚಿತ್ಯವೇನು
ಎಂದು ಪ್ರಶ್ನಿಸಿದ್ದಾರೆ.