Advertisement

ಮುರುಘಾ ಶ್ರೀ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಹಸ್ತ: ಸಿಎಂ ಬೊಮ್ಮಾಯಿ

11:47 AM Sep 02, 2022 | Team Udayavani |

ಮಂಗಳೂರು: ಮುರುಘಾ ಮಠದ ಸ್ವಾಮೀಜಿಯವರನ್ನು ಬಂಧಿಸುವಲ್ಲಿ ಯಾವುದೇ ವಿಳಂಬಕ್ಕೆ ನಾವು ಉತ್ತರಿಸುವ ಅಗತ್ಯವಿಲ್ಲ. ಕಾನೂನು ಪ್ರಕಾರ ಎಲ್ಲವನ್ನೂ ಮಾಡಲಾಗುವುದು ಎಂದು ನಾನು ಈಗಾಗಲೇ ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.

Advertisement

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈಗ ಮಾತನಾಡುವುದು ಸೂಕ್ತವಲ್ಲ. ನಾವು ಪೊಲೀಸರಿಗೆ ಮುಕ್ತ ಹಸ್ತ ನೀಡಿದ್ದೇವೆ ಮತ್ತು ಅವರು ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಬಂಧನಕ್ಕೊಳಗಾಗಿರುವ ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯ ಐಸಿಯು ವಾರ್ಡ್‌ಗೆ ಕರೆದೊಯ್ಯಲಾಗಿದೆ. ಅಪ್ರಾಪ್ತವಯಸ್ಕ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next