Advertisement

ಹೆಚ್ಚಿನ ಆರ್ಥಿಕ ನೆರವಿಗೆ ಸಿಎಂ ಎಚ್‌ಡಿಕೆ ಮನವಿ

06:20 AM Aug 31, 2018 | Team Udayavani |

ನವದೆಹಲಿ: ಕೊಡಗು ಸೇರಿ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರನ್ನು ಭೇಟಿ ಮನವಿ ಮಾಡಿದ್ದಾರೆ.

Advertisement

ಇದೇ ವೇಳೆ, ಹೆಚ್ಚುವರಿ ಹೊಣೆಗಾರಿಕೆ ನೀಡಿ, ಕೇಂದ್ರದ ವಿವಿಧ ಸೇವೆಗಳಿಗೆ ನಿಯೋಜನೆಗೊಂಡ ರಾಜ್ಯ ಕೇಡರ್‌ ಅಧಿಕಾರಿಗಳನ್ನು ವಾಪಸ್‌ ಕಳುಹಿಸುವುದೂ ಸೇರಿ ಹಲವು ಬೇಡಿಕೆಗಳ ಕುರಿತು ಚರ್ಚಿಸಿದ್ದಾರೆ. ಪ್ರಧಾನಮಂತ್ರಿ ಕಚೇರಿ
ವ್ಯವಹಾರಗಳ ರಾಜ್ಯ ಸಚಿವರೊಂದಿಗೆ ಕುಮಾರಸ್ವಾಮಿ ಸುದೀರ್ಘ‌ ಮಾತುಕತೆ ನಡೆಸಿದ್ದಾರೆ. “ನಾಗರಿಕ ಸೇವಾ ಅಧಿಕಾರಿಗಳ ನೇಮಕ ಹಾಗೂ ಇದಕ್ಕೆ ಕಾನೂನಿನ ಅಡಿಯಲ್ಲಿ ಏನೆಲ್ಲಾ ಕ್ರಮ ಕೈಗೊಳ್ಳಲು ಸಾಧ್ಯ ಎನ್ನುವುದರ ಬಗ್ಗೆ ಸಚಿವಾಲಯದ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಕೇಂದ್ರ ಸಚಿವರು ಹೇಳಿದ್ದಾಗಿ’ ಭೇಟಿ ಬಳಿಕ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next