Advertisement

CM ವಿರುದ್ಧ ದೂರು:4ವರ್ಷದಲ್ಲಿ ಪ್ರಚಾರಕ್ಕೆ ಖರ್ಚಾದ ಹಣ ಎಷ್ಟು ಗೊತ್ತಾ

12:42 PM Jan 01, 2018 | Sharanya Alva |

ಬೆಂಗಳೂರು:ರಾಜ್ಯ ಸರ್ಕಾರದ ಸಾಧನೆಗಳ ಪ್ರಚಾರಕ್ಕಾಗಿ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿರುವುದಾಗಿ ಆರೋಪಿಸಿ ಬೆಂಗಳೂರು ನಾಗರಿಕ ಹಕ್ಕು ಹೋರಾಟ ಸಮಿತಿ ಸೋಮವಾರ ಎಸಿಬಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದೆ.

Advertisement

ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯ ಸರ್ಕಾರದ ಸಾಧನೆಗಳ ಪ್ರಚಾರಕ್ಕೆಂದೇ ಬರೋಬ್ಬರಿ 129 ಕೋಟಿ ರೂಪಾಯಿ ದುರ್ಬಳಕೆ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದೆ.

ಪ್ರಚಾರದ ಹೆಸರಲ್ಲಿ ಬೃಹತ್ ಮೊತ್ತ ದುರ್ಬಳಕೆಯಾದ ಹಿನ್ನೆಲೆಯಲ್ಲಿ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿರುದ್ಧವೂ ತನಿಖೆ ನಡೆಸಬೇಕೆಂದು ಸಮಿತಿ ದೂರಿನಲ್ಲಿ ತಿಳಿಸಿದೆ. ಈಗಾಗಲೇ ಎಸಿಬಿಯಲ್ಲಿ ಸಿಎಂ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು, ಇದೀಗ ಹೊಸ ವರ್ಷದಂದೇ ಸಿಎಂ ವಿರುದ್ಧ ಮತ್ತೊಂದು ದೂರು ದಾಖಲಾದಂತಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next