Advertisement

ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ? ಸಿಎಂಗೆ ವಿಶ್ವನಾಥ್

05:01 PM Jun 05, 2017 | Team Udayavani |

ಮೈಸೂರು:ಜನ್ರಿಗೆ ನೀವು ಕೊಟ್ಟ ಭರವಸೆ ಈಡೇರಿಸಿದ್ರಾ. ನೀವು ಕೊಟ್ಟ ಭಾಗ್ಯಗಳು ಜನರನ್ನು ತಲುಪಿವೆಯಾ. ಹಾಗಾಗಿ ಸಾಧನಾ ಸಮಾವೇಶ ಮಾಡಿದವ್ರು ಪುನಃ ಅಧಿಕಾರಕ್ಕೆ ಬಂದಿಲ್ಲ ಎಂಬುದನ್ನು ನೆನಪಿಸಿಕೊಳ್ಳಿ ಎಂದು ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ ವಾಗ್ದಾಳಿ ನಡೆಸಿದರು.

Advertisement

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಸಾಧನಾ ಸಮಾವೇಶಗಳು ಮಾಡುವುದರಿಂದ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅದೇ ರೀತಿ ಸಾಧನಾ ಸಮಾವೇಶಗಳಿಗೆ ಸರ್ಕಾರದ ಹಣವನ್ನು ಬಳಸುವಂತಿಲ್ಲ. ಸಾರ್ವಜನಿಕ ಹಣ ಪೋಲು ಮಾಡುತ್ತಿರುವ ಬಗ್ಗೆ ಚರ್ಚೆ ನಡೆಯಬೇಕಾಗಿದೆ ಎಂದರು.

ದಿಗ್ವಿಜಯ್ ಸಿಂಗ್ ಅವರು ಉಸ್ತುವಾರಿ ಸ್ಥಾನದಿಂದ ಬದಲಾಗಿದ್ದರಿಂದ ನಾನು ಕಾಂಗ್ರೆಸ್ ನಲ್ಲಿ ಉಳಿದುಕೊಳ್ಳುವಂತಾಗಿದೆ. ಯಾಕೆಂದರೆ ನನ್ನನ್ನು ಕಾಂಗ್ರೆಸ್ ಪಕ್ಷದಿಂದ 6 ವರ್ಷಗಳ ಕಾಲ ಅಮಾನತು ಮಾಡಲು ಫೈಲ್ ಸಿದ್ದವಾಗಿತ್ತು. ಆದರೆ ರಾಜ್ಯ ಕಾಂಗ್ರೆಸ್ ಗೆ ವೇಣುಗೋಪಾಲ್ ಅವರು ನೂತನ ಉಸ್ತುವಾರಿಯಾಗಿ ಬಂದಿದ್ದು, ಅವರು ನನ್ನ ಪಕ್ಷದಲ್ಲಿ ಉಳಿಸಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಗುವುದೋ ಅಳುವುದೋ ನೀವೇ ಹೇಳಿ ಎಂದು ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಜೊತೆ ಅಳಲು ತೋಡಿಕೊಂಡ ವಿಶ್ವನಾಥ್ ಅವರು ಕಾಂಗ್ರೆಸ್ ನಲ್ಲಿ ಇರಬೇಕಾ ಬೇಡವಾ ನೀವೇ ಹೇಳಿ ಎಂದು ಪ್ರಶ್ನಿಸಿ, ಮುಂದೆ ಏನಾಗುತ್ತೋ ಕಾದು ನೋಡೋಣ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next