Advertisement

ಖರ್ಗೆ ಪರ ಪ್ರಚಾರಕ್ಕಾಗಿ ವಕ್ತಾರ ಹುದ್ದೆಗೆ ವಿಆರ್‌ಎಸ್‌ ರಾಜೀನಾಮೆ

07:20 PM Oct 05, 2022 | Team Udayavani |

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್‌. ಸುದರ್ಶನ್‌ ರಾಜೀನಾಮೆ ನೀಡಿದ್ದಾರೆ.

Advertisement

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಚಾರ ಮಾಡಬೇಕಿರುವ ಕಾರಣ ವಕ್ತಾರ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಪಕ್ಷದ ಅಧ್ಯಕ್ಷ ಹುದ್ದೆಗೆ ಸ್ಪರ್ಧೆ ಮಾಡಿರುವವರ ಪರ ಪ್ರಚಾರ ಮಾಡುವವರು ಯಾವುದೇ ಹುದ್ದೆಯಲ್ಲಿ ಇರುವಂತಿಲ್ಲ ಎಂಬುದು ನಿಯಮ.

ಹೀಗಾಗಿ, ಮುಖ್ಯ ವಕ್ತಾರ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಖರ್ಗೆ ಅವರ ಪರ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ವಿ.ಆರ್‌.ಸುದರ್ಶನ್‌ ತಿಳಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದರೆ ಕರ್ನಾಟಕದಲ್ಲಿ ಪಕ್ಷ ಮತ್ತಷ್ಟು ಗಟ್ಟಿಗೊಳ್ಳುವ ಜತೆಗೆ ಪಕ್ಷಕ್ಕೆ ಲಾಭವಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next