Advertisement

ಕಾಂಗ್ರೆಸ್ ಕಾರ್ಯಕರ್ತರಿಂದ ಮಂಡ್ಯ ಕೈ ಜಿಲ್ಲಾಧ್ಯಕ್ಷರ ಕಾರಿಗೆ ಮೊಟ್ಟೆ ಎಸೆತ

07:48 PM Mar 06, 2023 | Team Udayavani |

ಮಂಡ್ಯ:  ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಯ ಹೆಸರನ್ನು ಘೋಷಿಸದ ಕಾರಣಕ್ಕೆ ಮಂಡ್ಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ ಅವರ ಕಾರಿನ ಮೇಲೆ  ಸೋಮವಾರ ಮೊಟ್ಟೆ ದಾಳಿ ನಡೆಸಿದ್ದಾರೆ.ಕಾರಿನ ಮೇಲೆ ಮೊಟ್ಟೆ ಎಸೆದಿರುವ ವಿಡಿಯೋ ವೈರಲ್ ಆಗಿದೆ.

Advertisement

ಮಾಧ್ಯಮಗಳ ಪ್ರಕಾರ, ಗಂಗಾಧರ್ ಅವರು ಸೋಮವಾರ ಕೆಆರ್ ಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣಾ ತಯಾರಿ ಕುರಿತು ಪಕ್ಷದ ಕಾರ್ಯಕರ್ತರೊಂದಿಗೆ ಚರ್ಚಿಸಲು ತೆರಳಿದರು. ಆದರೆ, ಆ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹೆಸರಿಸುವಂತೆ ಪಕ್ಷದ ಕಾರ್ಯಕರ್ತರು ಒತ್ತಾಯಿಸಿದರು. ಸಂವಾದದ ವೇಳೆ ಕಾರ್ಯಕರ್ತರು ಅಭ್ಯರ್ಥಿಯ ಹೆಸರನ್ನು ಬಹಿರಂಗಪಡಿಸುವಂತೆ ಘೋಷಣೆಗಳನ್ನು ಕೂಗಿದರು, ಆದರೆ ಗಂಗಾಧರ್ ಮೌನವಾಗಿ ಉಳಿದುಕೊಂಕೊಂಡರು, ನಗುತ್ತಲೇ ಇದ್ದರು.

ಒತ್ತಾಯದ ನಡುವೆಯೂ ಕಾಂಗ್ರೆಸ್ ಮಂಡ್ಯ ಜಿಲ್ಲಾಧ್ಯಕ್ಷರು ಹೋಗಿ ತಮ್ಮ ಕಾರಿನೊಳಗೆ ಕುಳಿತುಕೊಳ್ಳುವಲ್ಲಿ ಯಶಸ್ವಿಯಾದರು. ಕೆಲವು ಹೊತ್ತಿನ ನಂತರ, ಪಕ್ಷದ ಕಾರ್ಯಕರ್ತರು ಬೆಂಗಾವಲು ಪಡೆಯಲ್ಲಿರುವ ಅವರ ಎಸ್‌ಯುವಿ ಮತ್ತು ಇತರ ಕಾರುಗಳ ಮೇಲೆ ಅನೇಕ ಮೊಟ್ಟೆಗಳನ್ನು ಒಡೆದರು.

ಸಚಿವ ಕೆ ಸಿ ನಾರಾಯಣ ಗೌಡ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದು, ವಿರೋಧ ಪಕ್ಷದ ಟಿಕೆಟ್‌ನಲ್ಲಿ ಚುನಾವಣೆ ಎದುರಿಸಬಹುದು ಎಂದು ಮಂಡ್ಯದ ರಾಜಕೀಯ ವಲಯಗಳಲ್ಲಿ ಚರ್ಚೆ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next