Advertisement
ಒಟ್ಟಾರೆ 43 ಅಭ್ಯರ್ಥಿಗಳಲ್ಲಿ ತಲಾ 8 ವೀರಶೈವ- ಲಿಂಗಾ ಯತ, ಒಕ್ಕಲಿಗರಿಗೆ ಅವಕಾಶ ಕಲ್ಪಿಸಲಾಗಿದ್ದು, ಹಿಂದುಳಿದ ವರ್ಗಕ್ಕೆ ಸೇರಿದ 9 ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಮಾಡ ಲಾಗಿದೆ. ಉಳಿದಂತೆ 3 ಅಲ್ಪಸಂಖ್ಯಾಕರು, ತಲಾ 2 ರೆಡ್ಡಿ ಮತ್ತು ಬಂಟರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳಿಗೆ ನೀಡಲಾಗಿದೆ. 11 ಮೀಸಲು ಕ್ಷೇತ್ರಗಳಿವೆ. ಇದರೊಂದಿಗೆ ಕಾಂಗ್ರೆಸ್ನ 3 ಪಟ್ಟಿ ಸೇರಿ ಹೊಸ ಮುಖಗಳ ಸಂಖ್ಯೆ 44ಕ್ಕೆ ಏರಿಕೆಯಾಗಿದೆ.
Related Articles
Advertisement
ಔರಾದ ಮೀಸಲು ಕ್ಷೇತ್ರದಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ನಿವೃತ್ತ ಕೆಎಎಸ್ ಅಧಿಕಾರಿ ಡಾ| ಭೀಮಸೇನರಾವ್ ಶಿಂಧೆಗೆ ಟಿಕೆಟ್ ಘೋಷಿಸಲಾಗಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ, ಯುವ ಮುಖಂಡ ಬಸವರಾಜ್ ವಿ. ಶಿವಗಂಗಾಗೆ ಟಿಕೆಟ್ ನೀಡಿದೆ. ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ 37 ವರ್ಷದ ಇವರು ಶಿವಗಂಗಾ ಗ್ರೂಪ್ಸ್ ಮಾಲಕರೂ ಆಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ತೇರದಾಳ ಕ್ಷೇತ್ರದಲ್ಲಿ ಕಬ್ಬಡ್ಡಿ ಕ್ರೀಡಾಪಟು ಸಿದ್ದು ಕೊಣ್ಣೂರ ಅವರನ್ನು ಕಣಕ್ಕಿಳಿಸಲಾಗಿದೆ. ಇವರು ಕಾಂಗ್ರೆಸ್ನ ಸಕ್ರಿಯ ಕಾರ್ಯಕರ್ತರಾಗಿದ್ದು, ಹಲವು ಉದ್ಯಮದಲ್ಲೂ ತೊಡಗಿದ್ದಾರೆ. ಇವರಿಗೆ ಯಾವುದೇ ಚುನಾವಣೆಯ ಅನುಭವವಿಲ್ಲ. ಬಾದಾಮಿ ಕ್ಷೇತ್ರದಲ್ಲಿ ಬಿ.ಬಿ.ಚಿಮ್ಮನಕಟ್ಟಿ ಪುತ್ರ ಭೀಮಸೇನ ಚಿಮ್ಮನಕಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಮೀಸಲು ಕ್ಷೇತ್ರದಲ್ಲಿ ನಯನ ಮೋಟಮ್ಮ ಅವರನ್ನು ಕಣಕ್ಕಿಳಿಸಲಾಗಿದ್ದು, ಇದೇ ಮೊದಲ ಬಾರಿ ಚುನಾವಣೆ ಎದುರಿಸುತ್ತಿದ್ದಾರೆ. ಇವರು ಕಾಂಗ್ರೆಸ್ ನಾಯಕಿ ಮೋಟಮ್ಮ ಅವರ ಪುತ್ರಿ. ಎಲ್ಎಲ್ಬಿ, ಎಲ್ಎಲ್ಎಂ ಪದವಿ ಪಡೆದಿದ್ದು, ವಿವಿಧ ಖಾಸಗಿ ಕಂಪೆನಿಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ಕ್ಷೇತ್ರದಲ್ಲಿ ಶ್ರೀದೇವಿ ನಾಯಕಗೆ ಟಿಕೆಟ್ ಸಿಕ್ಕಿದೆ. ಇವರು ಮಾಜಿ ಸಂಸದ, ಶಾಸಕ ಎ.ವೆಂಕಟೇಶ ನಾಯಕ ಸೊಸೆ, ಹಾಲಿ ಶಾಸಕ ಕೆ.ಶಿವನಗೌಡ ನಾಯಕಗೆ ಸಂಬಂಧಿಯಾಗಿದ್ದಾರೆ. ಆ ಮೂಲಕ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ನಿಂದ ಸಂಬಂಧಿಗಳ ಕದನ ಮುಂದುವರಿದಂತಾಗಿದೆ.
ಪ್ರದೀಪ್ ಈಶ್ವರ್ಗೆ ಬಯಸದೇ ಬಂದ ಭಾಗ್ಯಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಸಚಿವ ಡಾ| ಕೆ.ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ಎಂಬ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಬೆಂಗಳೂರಿನಲ್ಲಿ ಪರಿಶ್ರಮ ನೀಟ್ ಅಕಾಡೆಮಿ ಮುಖ್ಯಸ್ಥ ರಾಗಿರುವ ಇವರಿಗೆ ಯಾವುದೇ ರಾಜಕಿಯ ಹಿನ್ನಲೆ ಇಲ್ಲ. ಟಿಕೆಟ್ಗೆ ಅರ್ಜಿ ಸಲ್ಲಿಸದೇ ಇದ್ದರೂ ಬಯಸದೇ ಬಂದ ಭಾಗ್ಯ. ನಿವೇದಿತ್ ಆಳ್ವಾ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕ್ಷೇತ್ರದಲ್ಲಿ ಮಾರ್ಗರೆಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾಗೆ ಟಿಕೆಟ್ ಕಲ್ಪಿಸಲಾಗಿದೆ. ಯುವ ಕಾಂಗ್ರೆಸ್ನಲ್ಲಿ ಕೆಲಸ ಮಾಡಿದ್ದು, ದೇಶದ ನಾನಾ ರಾಜ್ಯಗಳಲ್ಲಿ ಕಾಂಗ್ರೆಸ್ ಪರ ವಿವಿಧ ಜವಾಬ್ದಾರಿ ನಿರ್ವಹಿಸಿದ ಅನುಭವವಿದೆ. ರಾಜಕೀಯವಾಗಿ ಪ್ರಭಾವಿ ಮನೆತನದಿಂದ ಬಂದಿರುವ ನಿವೇದಿತ್ ಆಳ್ವಾ ಸೋನಿಯಾ, ರಾಹುಲ್ ಕುಟುಂಬದ ಆಪ್ತರಲ್ಲೊಬ್ಬರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿರುವ ನಿವೇದಿತ್ ಹತ್ತು ವರ್ಷಗಳಿಂದ ಜಿಲ್ಲೆಯಲ್ಲಿ ನೆಲೆಸಿದ್ದಾರೆ.