Advertisement

Karnataka Election: ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಶೇ.75 ಮೀಸಲಾತಿ: ಸಿದ್ದರಾಮಯ್ಯ

03:03 PM Apr 28, 2023 | Team Udayavani |

ರಾಯಚೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ.75 ರಲ್ಲಿ ಮೀಸಲಾತಿ ಹೆಚ್ಚಳ ಮಾಡುವುದು ಶತಸಿದ್ದ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

Advertisement

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು ಈಗಿರುವ ಶೇ.50ರಷ್ಟು ಮೀಸಲಾತಿಯನ್ನು ಶೇ. 75ಕ್ಕೆ ಹೆಚ್ಚಿಸಲಾಗುವುದು. ಶೆಡ್ಯುಲ್ 9 ಅನ್ವಯ ಮೀಸಲಾತಿ ಜಾರಿ ಮಾಡುತ್ತೇವೆ. ತಮಿಳುನಾಡಿನಲ್ಲಿ ಶೇ.69ರಷ್ಟಿದೆ.
ಇಂದ್ರಸಹನಿ ಪ್ರಕರಣದಲ್ಲಿ ಶೇ.50ರಷ್ಟು ಮೀರಬಾರದು. ಆದರೆ, ಮೀಸಲಾತಿಯನ್ನು ಹೆಚ್ಚಿಸಲೇಬಾರದು ಎಂದಿಲ್ಲ. ಮುಸ್ಲಿಮರಿಗೆ, ಲಿಂಗಾಯತರಿಗೆ, ಒಕ್ಕಲಿಗರಿಗೆ ಸೇರಿದಂತೆ ಎಲ್ಲ ಸಮುದಾಯಗಳಿಗೂ ನ್ಯಾಯ ಕಲ್ಪಿಸಲಾಗುವುದು. ಈ ವಿಚಾರವನ್ನು ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಚರ್ಚಿಸಲಾಗುವುದು ಎಂದರು.

ರಾಜ್ಯದ ನಾಯಕರಿಗೆ ವೋಟ್ ತರುವ ಶಕ್ತಿಯಿಲ್ಲ. ಅದಕ್ಕೆ ಮೋದಿ, ಯೋಗಿ, ನಡ್ಡಾ, ಶಾ ಬಂದು ಪ್ರಚಾರ ಮಾಡುತ್ತಿದ್ದಾರೆ.

ಪೊಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ದಿಕ್ಕತಪ್ಪಿಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next