Advertisement

Karnataka Election:ಕೈ-ಕಮಲ ಟಿಕೆಟ್‌ ವಂಚಿತರು ಜೆಡಿಎಸ್‌ನತ್ತ

11:55 PM Apr 17, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ ಹಾಗೂ ಬಿಜೆಪಿ ಯಿಂದ ಮತ್ತಷ್ಟು ಟಿಕೆಟ್‌ ವಂಚಿತರು ಜೆಡಿಎಸ್‌ನತ್ತ ಬರುವ ಸಾಧ್ಯತೆಯಿದೆ. ಬಿಜೆಪಿ ಟಿಕೆಟ್‌ ವಂಚಿತ ಹಾವೇರಿಯ ನೆಹರು ಓಲೇಕಾರ್‌, ಶಿವಮೊಗ್ಗದ ಕಾಂಗ್ರೆಸ್‌ ಟಿಕೆಟ್‌ ವಂಚಿತ ಪ್ರಸನ್ನ ಕುಮಾರ್‌ ಸೇರಿದಂತೆ ಹಲವರು ಈಗಾಗಲೇ ಎಚ್‌.ಡಿ. ಕುಮಾರಸ್ವಾಮಿ ಯವರನ್ನು ಸಂಪರ್ಕಿಸಿ ಪಕ್ಷ ಸೇರುವ ಬಗ್ಗೆ ಚರ್ಚೆ ನಡೆಸಿದ್ದಾರೆ.

Advertisement

ಕೊಪ್ಪಳದ ಕರಡಿ ಸಂಗಣ್ಣ ಅವರೂ ಬಿಜೆಪಿ ಟಿಕೆಟ್‌ ಸಿಗದಿದ್ದರೆ ಜೆಡಿಎಸ್‌ಗೆ ಬರುವುದಾಗಿ ಹೇಳಿದ್ದರಾ ದರೂ, ಅವರ ಸೊಸೆಗೆ ಬಿಜೆಪಿ ಟಿಕೆಟ್‌ ಸಿಕ್ಕಿರುವುದರಿಂದ ಅವರ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ.

ಅಖಂಡ ಪಕ್ಷೇತರ?
ಮತ್ತೂಂದೆಡೆ ಪುಲಕೇಶಿ ನಗರದಲ್ಲಿ ಕಾಂಗ್ರೆಸ್‌ ಟಿಕೆಟ್‌ ತಪ್ಪಿಸಿಕೊಂಡಿರುವ ಅಖಂಡ ಶ್ರೀನಿವಾಸಮೂರ್ತಿ ಅವರನ್ನು ಜೆಡಿಎಸ್‌ ಮುಖಂಡರು ಸಂಪರ್ಕ ಮಾಡಿದ್ದಾರೆ. ಆದರೆ, ಅವರು ಪಕ್ಷೇತರ ಅಭ್ಯರ್ಥಿ ಯಾಗಿ ಸ್ಪರ್ಧೆಗೆ ಒಲವು ಹೊಂದಿದ್ದು ಯಾವುದಕ್ಕೂ ಕಾಲಾವಕಾಶ ಕೇಳಿದ್ದಾರೆ ಎಂದು ಹೇಳಲಾಗಿದೆ.
ಕಲ್ಯಾಣ ಕರ್ನಾಟಕದ ಹಲವು ಮುಖಂಡರು ಜೆಡಿಎಸ್‌ ಸೇರಲು ಮುಂದಾಗಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿಯ ಎಲ್ಲ ಕ್ಷೇತ್ರಗಳ ಟಿಕೆಟ್‌ ಘೋಷಣೆಯಾದ ಬಳಿಕ ಸ್ಪಷ್ಟತೆ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next