Advertisement

Karnataka Election: ಸವದತ್ತಿಯಲ್ಲಿ ಅಕ್ರಮ ಕುಕ್ಕರ್ ದಾಸ್ತಾನು ಪತ್ತೆ

05:21 PM Apr 22, 2023 | Team Udayavani |

ಬೆಳಗಾವಿ: ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮಕ್ಕೆ ಹೊಂದಿಕೊಂಡಂತೆ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ಗಡಿ ಅಂಚಿನಲ್ಲಿರುವ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ‌ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

Advertisement

ಖಚಿತ ಮಾಹಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡವು ಶನಿವಾರ ಮಧ್ಯಾಹ್ನ ತೋಟದ ಮನೆಯ ತಗಡಿನ ಷೆಡ್ ನಲ್ಲಿದ್ದ ಸುಮಾರು 1600 ಕುಕ್ಕರ್ ಗಳನ್ನು ಪತ್ತೆ ಮಾಡಿದೆ.

ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದಂತೆ ಎಫ್ .ಎಸ್. ಟಿ ಟೀಮ್ ಹಾಗೂ ಸವದತ್ತಿ ವಲಯದ ಅಧಿಕಾರಿಗಳ ಸಿಬ್ಬಂದಿಯೊಂದಿಗೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 54ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶೆಡ್ಡಿನ ಬಾಗಿಲನ್ನು ತೆರೆದು ನೋಡುದಾಗ ಕುಕ್ಕರ್ ಪೆಟ್ಟಿಗೆಗಳಿರುವುದು ಕಂಡುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next