Advertisement

Karnataka Election;ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ಮುಸ್ಲಿಮರ ಆಕ್ರೋಶ

06:13 PM Apr 22, 2023 | Team Udayavani |

ಚಿಕ್ಕಮಗಳೂರು : ಕೆಇಬಿ ಸರ್ಕಲ್ ನಲ್ಲಿರುವ ಈದ್ಗಾ ಮೈದಾನಕ್ಕೆ ರಂಜಾನ್ ಹಬ್ಬದ  ಶುಭಾಶಯ ಕೋರಿ ಮಾತನಾಡಲು ಬಂದಿದ್ದ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ. ತಮ್ಮಯ್ಯ ವಿರುದ್ಧ ಮುಸ್ಲಿಮರು ತೀವ್ರ ಆಕ್ರೋಶ ಹೊರ ಹಾಕಿದ ಘಟನೆ ಶನಿವಾರ ನಡೆದಿದೆ.

Advertisement

ಕಾಂಗ್ರೆಸ್ ಚುನಾವಣ ಪ್ರಚಾರ ಮಾಡುತ್ತಿದೆ ಎಂದು ಸಾಮೂಹಿಕ ಪ್ರಾರ್ಥನೆಗೆ ಆಗಮಿಸಿದ ಹಲವಾರು ಮುಸ್ಲಿಮರು ಕಿಡಿ ಕಾರಿದ್ದಾರೆ. ಕೈ ಅಭ್ಯರ್ಥಿ ಮಾತನಾಡುವುದಕ್ಕೆ ಮುಸ್ಲಿಮರು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಈ ವೇಳೆ ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆಯಿತು.

ಹೆಚ್.ಡಿ. ತಮ್ಮಯ್ಯ ಮೂಕ ಪ್ರೇಕ್ಷಕನಾಗಿ ನಿಂತಿದ್ದರು. ಆಕ್ರೋಶ ತೀವ್ರವಾಗುತ್ತಿದ್ದಂತೆ ಮುಜುಗರಕ್ಕೀಡಾಗಿ ಸ್ಥಳದಿಂದ ಸ್ಥಳದಿಂದ ಮರಳಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ ಅವರು ಆಕ್ರೋಶಿತರ ಸಮಾಧಾನಕ್ಕೆ ಮುಂದಾದರೂ ಸಾಧ್ಯವಾಗಲಿಲ್ಲ.

Advertisement

Udayavani is now on Telegram. Click here to join our channel and stay updated with the latest news.

Next