Advertisement

Karnataka Election Result: ಶಿಮ್ಲಾದಲ್ಲಿ ಧ್ಯಾನದಲ್ಲಿ ತೊಡಗಿದ ಪ್ರಿಯಾಂಕಾ ಗಾಂಧಿ

10:08 AM May 13, 2023 | Team Udayavani |

ಶಿಮ್ಲಾ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಶಿಮ್ಲಾದ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದರು.

Advertisement

ಪ್ರಿಯಾಂಕಾ ಗಾಂಧಿ ಅವರು ಶಿಮ್ಲಾದ ಜಖುವಿನ ಹನುಮಾನ್ ದೇವಸ್ಥಾನದಲ್ಲಿ “ದೇಶ ಮತ್ತು ಕರ್ನಾಟಕದ ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸುತ್ತಿದ್ದರು” ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. “ನಾನು ಅಜೇಯ. ನಾನು ತುಂಬಾ ಆತ್ಮವಿಶ್ವಾಸ ಹೊಂದಿದ್ದೇನೆ. ಹೌದು, ಇಂದು ತಡೆಯಲಾಗದು.” ಎಂದು ಆತ್ಮವಿಶ್ವಾಸದ ಕಾಂಗ್ರೆಸ್ ಟ್ವೀಟ್ ಮಾಡಿದೆ.

224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು ಕಾಂಗ್ರೆಸ್ ನಾಯಕರು ವಿಶ್ವಾಸ ವ್ಯಕ್ತಪಡಿಸಿದರು.

2018ರ ಚುನಾವಣೆಯಲ್ಲಿ 80 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಬಳಿಕ ಅಚ್ಚರಿಯ ರೀತಿಯಲ್ಲಿ ಜೆಡಿಎಸ್ ಜತೆ ಸೇರಿ ಸರ್ಕಾರ ರಚಿಸಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next