Advertisement

Karnataka Election ಎ.25 ರಂದು ರಬಕವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

07:10 PM Apr 23, 2023 | Team Udayavani |

ರಬಕವಿ-ಬನಹಟ್ಟಿ:  ಎ.25 ರಂದು ಬೆಳಗ್ಗೆ 10ಕ್ಕೆ ಬಿಜೆಪಿ ಚಾಣಕ್ಯ, ಮುತ್ಸದ್ದಿ, ಕೇಂದ್ರ ಗೃಹ ಸಚಿವ ಅಮಿತ ಶಾ ರಬಕವಿಯ ಎಂ.ವಿ.ಪಟ್ಟಣ ಶಾಲೆಯ ಬದಿಗಿರುವು ರಾಮಪ್ಪ ಚಿಕ್ಕೋಡಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತೇರದಾಳ ಮತಕ್ಷೇತ್ರದ ಚುನಾವಣೆಯ ಉಸ್ತುವಾರಿ ವಹಿಸಿಕೊಂಡಿರುವ ಅರುಣ ಶಹಾಪುರ ತಿಳಿಸಿದರು.

Advertisement

ಭಾನುವಾರ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಬಕವಿಯ ಹಜಾರೆ ಟೆಕ್ಸಟೈಲ್ಸ್ ಬಳಿಯ ಮೈದಾನದಲ್ಲಿನ ಹೆಲಿಪ್ಯಾಡ್‌ಗೆ ಬಂದಿಳಿದು ದೇವತಾ ದರ್ಶನದ ಬಳಿಕ ಬಹಿರಂಗ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸ್ಟಾರ್ ಪ್ರಚಾರಕ ಅಮಿತ್ ಶಾ ಆಗಮನದಿಂದ ಕಾರ್ಯಕರ್ತರಿಗೆ ಮತ್ತು ಬಿಜೆಪಿಗೆ ಆನೆ ಬಲ ತಂದಿದ್ದು, ನಮ್ಮ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷ ಬಲಗೊಳಿಸಲು ನೆರವಾಗಲಿದೆ. ಈ ಸಂದರ್ಭದಲ್ಲಿ ತೇರದಾಳ ವಿಧಾನ ಸಭಾ ಕ್ಷೇತ್ರದ ಮತದಾರ ಬಾಂಧವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇನ್ನೂ ನಾಮಪತ್ರಗಳನ್ನು ಹಿಂದಕ್ಕೆ ಪಡೆದುಕೊಳ್ಳುವುದು ಬಾಕಿ ಇರುವಾಗಲೇ ಬಿಜೆಪಿ ರಾಷ್ಟ್ರದ ಪ್ರಮುಖರನ್ನು ಪ್ರಚಾರಕ್ಕೆ ಕರೆ ತರುತ್ತಿರುವುದು ರಾಜ್ಯದಲ್ಲಿ ಪಕ್ಷ ಮುಂದಿನ ದಿನಗಳಲ್ಲಿ ಪೂರ್ತಿಯಾದ ಬಹುಮತ ಪಡೆದುಕೊಳ್ಳುವುದರ ಮುನ್ಸೂಚನೆಯಾಗಿದೆ ಎಂದರು.

ಬಿಜೆಪಿ ಅಭ್ಯರ್ಥಿ ಶಾಸಕ ಸಿದ್ದು ಸವದಿ ಮಾತನಾಡಿ, ತೇರದಾಳ ಮತಕ್ಷೇತ್ರಕ್ಕೆ ಅಮಿತ ಶಾ ಇದೇ ಪ್ರಥಮ ಬಾರಿಗೆ ಆಗಮಿಸುತ್ತಿದ್ದು, ಅಂದಾಜು ಇಪ್ಪತ್ತು ಸಾವಿರದಷ್ಟು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ದೇಶದ ಹಿತಕ್ಕಾಗಿ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಂಡಿರುವ ಅಮಿತ ಶಾ ಆಗಮನದಿಂದಾಗಿ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಲಿದೆ ಎಂದರು.

ಧರೆಪ್ಪ ಉಳ್ಳಾಗಡ್ಡಿ, ಸುರೇಶ ಅಕ್ಕಿವಾಟ, ಸಂಜಯ ತೆಗ್ಗಿ, ಸಿದ್ದಣ್ಣ ಪಾಟೀಲ, ಸಿದ್ರಾಮ ಸವದತ್ತಿ, ಗೋವಿಂದ ಡಾಗಾ, ಶ್ರೀಶೈಲ ಬೀಳಗಿ, ಚಿದಾನಂದ ಹೊರಟ್ಟಿ, ಶಂಕರ ಹುನ್ನೂರ, ವರ್ಧಮಾನ ಕೋರಿ, ಶಿವಕುಮಾರ ಭದ್ರನವರ, ಸುರೇಶ ಚಿಂಡಕ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next