Advertisement

ರಾಜ್ಯಕ್ಕೆ ಪ್ರತ್ಯೇಕ ಧ್ವಜ, ಸುಮ್ಮನೆ ವಿವಾದ ಮಾಡಬೇಡಿ; ರಾಜ್ಯ ಸರ್ಕಾರ

03:17 PM Jul 19, 2017 | Sharanya Alva |

ಬೆಂಗಳೂರು: ಕರ್ನಾಟಕ ರಾಜ್ಯಕ್ಕೆ ಪ್ರತ್ಯೇಕ ಧ್ವಜ ರೂಪಿಸಿ, ಅದಕ್ಕೆ ಕಾನೂನು ಮಾನ್ಯತೆ ನೀಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ 9 ಮಂದಿಯ ಸಮಿತಿಯ ಶಿಫಾರಸಿನ ಬಳಿಕ ಮುಂದಿನ ತೀರ್ಮಾನ. ಹಾಗಾಗಿ ಈ ವಿಷಯದಲ್ಲಿ ವಿವಾದ ಮಾಡೋದು ಬೇಡ ಎಂದು ಸಚಿವ ಟಿಬಿ ಜಯಚಂದ್ರ ತಿಳಿಸಿದ್ದಾರೆ.

Advertisement

ರಾಜ್ಯಕ್ಕೆ ಪ್ರತ್ಯೇಕ ಧ್ವಜ ವಿವಾದ ಕುರಿತಂತೆ ಬುಧವಾರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಜಯಚಂದ್ರ ಅವರು ವಿವರ ನೀಡಿದರು.

ರಾಜ್ಯಕ್ಕೆ ಪ್ರತ್ಯೇಕ ಧ್ವಜದ ವಿಚಾರದಲ್ಲಿ ಕಾನೂನಿನಲ್ಲಿ ಇದಕ್ಕೆ ಯಾವುದೇ ತೊಡಕಾಗುವುದಿಲ್ಲ. ಆದರೆ ಇದನ್ನು ವಿವಾದಾಸ್ಪವನ್ನಾಗಿ ಮಾಡುವುದು ಬೇಡ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next