Advertisement

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಕಗ್ಗೊಲೆ: ಮಾಯಾವತಿ

01:07 PM May 17, 2018 | Team Udayavani |

ನವದೆಹಲಿ: ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಮೌಲ್ಯಗಳ ಕಗ್ಗೊಲೆಯಾಗಿದೆ ಎಂದು ಬಿಎಸ್ ಪಿ ಅಧ್ಯಕ್ಷೆ ಮಾಯಾವತಿ ಗಂಭೀರವಾಗಿ ಆರೋಪಿಸಿದ್ದಾರೆ.

Advertisement

ಅಗತ್ಯ ಬಹುಮತ ಇಲ್ಲದಿದ್ದರೂ ಬಿಜೆಪಿಗೆ ಅಧಿಕಾರ ಕೊಟ್ಟು, ಬಹುಮತ ಇರುವ ಮೈತ್ರಿಕೂಟವನ್ನು ಅಧಿಕಾರದಿಂದ ವಂಚಿಸಲಾಗಿದೆ ಎಂದು ಹೇಳಿದರು.

ಗುರುವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷದಿಂದ ಒಬ್ಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಆದರೆ ಬಹುಮತ ಇಲ್ಲದ ಬಿಜೆಪಿಗೆ ಅಧಿಕಾರ ಕೊಟ್ಟಿರುವ ರಾಜ್ಯಪಾಲ ವಜೂಬಾಯಿ ವಾಲಾ ಅವರ ಕ್ರಮವನ್ನು ಬಿಎಸ್ಪಿ ಖಂಡಿಸುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next