Advertisement

ಗೌರಿ ಲಂಕೇಶ್ ಹತ್ಯೆ ಕೇಸ್ ತನಿಖೆಗೆ SIT ರಚನೆ; ಸಿದ್ದರಾಮಯ್ಯ

12:32 PM Sep 06, 2017 | Team Udayavani |

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದೇನೆ. ಈ ಹಿನ್ನೆಲೆಯಲ್ಲಿ ಐಜಿ ನೇತೃತ್ವದ ಎಸ್ಐಟಿ ತಂಡವನ್ನು ತನಿಖೆಗಾಗಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

Advertisement

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬುಧವಾರ ಹಿರಿಯ ಅಧಿಕಾರಿಗಳು, ಸಚಿವರ ಜತೆ ಸಮಾಲೋಚನೆ ನಡೆಸಿದ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಎಲ್ಲಾ ಪ್ರಗತಿಪರ ಚಿಂತಕರಿಗೂ ಪೊಲೀಸ್ ಭದ್ರತೆ ಒದಗಿಸಲು ಸೂಚಿಸಲಾಗಿದೆ. ಏತನ್ಮಧ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವ ಕುರಿತ ಪ್ರಶ್ನೆಗೆ, ಸಿಬಿಐ ತನಿಖೆಗೆ ಒಪ್ಪಿಸುವ ಬಗ್ಗೆ ನಮಗೆ ತಕರಾರಿಲ್ಲ. ಆದರೆ ಎಸ್ಐಟಿ ಬಗ್ಗೆ ನಮಗೆ ವಿಶ್ವಾಸವಿದೆ. ನಂತರ ಆ ಬಗ್ಗೆ ನೋಡೋಣ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next