Advertisement
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವೆ ಸಂಪುಟಕ್ಕೆ ಯಾರು ಸೇರ್ಪಡೆಯಾಗಬೇಕು, ಯಾರಾಗಬಾರದು ಎಂಬ ವಿಚಾರದಲ್ಲಿ ನಡೆದ ಜಟಾಪಟಿಯಿಂದ ಇಪ್ಪತ್ತು ಮಂದಿ ಔಟ್ ಆದರು ಎಂದು ಮೂಲಗಳು ತಿಳಿಸಿವೆ.
Related Articles
Advertisement
ಸಂಪುಟ ರಚನೆಗೆ ಸಂಬಂಧಿಸಿದಂತೆ ರಾತ್ರಿ 11 ಗಂಟೆವರೆಗೂ 28 ಮಂದಿ ಸೇರ್ಪಡೆಯ ಪಟ್ಟಿ ಸಿದ್ಧವಾಗಿತ್ತು. ಆ ನಂತರ ಅದು ಬದಲಾಯಿತು ಎಂದು ಹೇಳಲಾಗಿದೆ.
ಬೋಸರಾಜ್ಗೆ ವಿರೋಧಇದರ ಜತೆಗೆ ಯಾವುದೇ ಸದನದ ಸದಸ್ಯರಲ್ಲದ ವಿಧಾನಪರಿಷತ್ನ ಮಾಜಿ ಸದಸ್ಯ ಎನ್.ಎಸ್.ಬೋಸ್ರಾಜ್ ಹೆಸರು ಮೊದಲ ಪಟ್ಟಿಯಲ್ಲೇ ಸೇರಲು ಒತ್ತಡ ಇತ್ತಾದರೂ, ಬೇರೆ ರೀತಿಯ ಸಂದೇಶ ಹೋಗಬಹುದು ಎಂದು ಕೈ ಬಿಡಲಾಯಿತು ಎಂದು ಹೇಳಲಾಯಿತು. ಜಮೀರ್ಗೆ ಡಿಕೆ ವಿರೋಧ
ಜಮೀರ್ ಅಹಮದ್ ಅವರ ಹೆಸರು ಮೊದಲ ಪಟ್ಟಿಯಲ್ಲಿ ಸೇರಿಸಲು ಡಿ.ಕೆ.ಶಿವಕುಮಾರ್ ವಿರೋಧವಿತ್ತು. ಆದರೆ, ಸಿದ್ದರಾಮಯ್ಯ ಪಟ್ಟು ಬಿಡದೆ ಸೇರಿಸಿದರು. ಡಿ.ಕೆ.ಶಿವಕುಮಾರ್ ಪ್ರಸ್ತಾಪಿಸಿದ ಮುಸ್ಲಿಂ ಶಾಸಕರ ಬಗ್ಗೆ ಸಿದ್ದರಾಮಯ್ಯ, ತಮ್ಮ ಕ್ಷೇತ್ರ ಹೊರತುಪಡಿಸಿ ಇನ್ನೊಂದು ಕ್ಷೇತ್ರದಲ್ಲಿ ಮತ ತರದವರಿಗೆ ಅವಕಾಶ ಕೊಡಲು ಆಗದು. ಸ್ಟಾರ್ ಪ್ರಚಾರಕರಾಗಿ 100 ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಪ್ರಾಬಲ್ಯ ಇರುವ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ ಪಕ್ಷಕ್ಕೆ ಶಕ್ತಿ ತುಂಬಿದ ಜಮೀರ್ ಅಹಮದ್ ಬಿಡಲು ಸಾಧ್ಯವಿಲ್ಲ ಎಂದು ಹಠ ಹಿಡಿದರು. ಆಗ ಇದಕ್ಕೆ ಸುರ್ಜೇವಾಲಾ, ವೇಣುಗೋಪಾಲ್ ಸಹ ಸಮ್ಮತಿಸಿದರು ಎಂದು ಹೇಳಲಾಗಿದೆ. ಸಾಮಾಜಿಕ ನ್ಯಾಯ
ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದ ಹತ್ತು ಮಂದಿ ಪೈಕಿ ಒಕ್ಕಲಿಗ, ಲಿಂಗಾಯತ ಹಾಗೂ ಹಿಂದುಳಿದ ವರ್ಗದಿಂದ ಒಬ್ಬಬ್ಬರೇ ಪ್ರತಿನಿಧಿ. ಉಳಿದಂತೆ, ಎಸ್ಸಿ-ಎಸ್ಟಿ ಕೋಟಾದ ಬಲಗೈನ ಇಬ್ಬರು, ಎಡಗೈನ ಒಬ್ಬರು, ಪರಿಶಿಷ್ಟ ಪಂಗಡದ ಒಬ್ಬರಿಗೆ ಅವಕಾಶ ಮಾಡಿಕೊಡಲಾಗಿದೆ. ಅಲ್ಪಸಂಖ್ಯಾತ ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಕ್ಕೆ ಒಂದೊಂದು ಸ್ಥಾನ ನೀಡಲಾಗಿದೆ.