Advertisement

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

07:37 PM Sep 21, 2024 | Team Udayavani |

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಜಾತಿ ನಿಂದನೆ ಮತ್ತು ಅತ್ಯಾಚಾರ ಪ್ರಕರಣ ಸೇರಿದಂತೆ ಮೂರು ಕ್ರಿಮಿನಲ್ ಪ್ರಕರಣಗಳ ತನಿಖೆಗೆ ರಾಜ್ಯ ಸರಕಾರಿ ಶನಿವಾರ(ಸೆ21) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಿಐಡಿ) ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ.

Advertisement

ಹಿಂದಿನ ದಿನ ಆಪಾದಿತ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯವು ಮುನಿರತ್ನ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಬೆನ್ನಲ್ಲೇ ಸರಕಾರದಿಂದ ಈ ಪ್ರಕಟಣೆ ಹೊರಬಿದ್ದಿದೆ.

ತನಿಖಾ ತಂಡದಲ್ಲಿ ಮೂವರು ಐಪಿಎಸ್ ಅಧಿಕಾರಿಗಳಾದ ಲಾಭು ರಾಮ್, ಸೌಮ್ಯಲತಾ ಎಸ್ ಕೆ ಮತ್ತು ಸಿ.ಎ. ಸೈಮನ್ ಅವರಿದ್ದಾರೆ.

ಇದನ್ನೂ ಓದಿ: BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ

ಮುನಿರತ್ನ ವಿರುದ್ಧದ ಮೂರು ಪ್ರಕರಣಗಳು ಮಾತ್ರವಲ್ಲದೆ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ಮುನಿರತ್ನ ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ತನಿಖೆಯನ್ನು ನಡೆಸಲು ತಂಡಕ್ಕೆ ಸೂಚನೆ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next