Advertisement

ಶಂಕಿತ ಉಗ್ರನ ತಂದೆಗೆ 10 ಸಾವಿರ ರೂ. ದಂಡ ವಿಧಿಸಿದ ಹೈಕೋರ್ಟ್‌

10:11 PM Sep 20, 2022 | Team Udayavani |

ಬೆಂಗಳೂರು: ಭಯೋತ್ಪಾದಕ ಕೃತ್ಯ ಎಸಗಲು ಒಳಸಂಚು ರೂಪಿಸಿದ ಆರೋಪದಡಿ ವಿಚಾರಣೆಗಾಗಿ ತಮ್ಮ ಮಗನನ್ನು ಪೊಲೀಸರು ಕರೆದುಕೊಂಡು ಹೋಗಿರುವ ವಿಚಾರ ಗಮನಕ್ಕೆ ಬಂದಿದ್ದರೂ ಸಹ ಮಗನನ್ನು ಹುಡುಕಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸರಕಾರಕ್ಕೆ ಆದೇಶಿಸುವಂತೆ ಕೋರಿ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದಾತನಿಗೆ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ವಿಭಾಗೀಯ ನ್ಯಾಯಪೀಠ 10 ಸಾವಿರ ರೂ. ದಂಡ ವಿಧಿಸಿದೆ.

Advertisement

ಮಗ ಮಾಝ್ ಕಾಣೆಯಾಗಿರುವ ಬಗ್ಗೆ ಮಂಗಳೂರಿನಲ್ಲಿ ನೆಲೆಸಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುನೀರ್‌ ಅಹ್ಮದ್‌ ಮಂಗಳೂರು ಪೂರ್ವ ಪೊಲೀಸ್‌ ಠಾಣೆಗೆ ಸೆ. 17ರಂದು ಇ-ಮೇಲ್‌ ಮೂಲಕ ದೂರು ನೀಡಿದ್ದರು. ಸೆ. 19ರಂದು ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿ, ತಮ್ಮ ಮಗನನ್ನು ಹುಡುಕಿ ಕೊಡುವಂತೆ ಹೈಕೋರ್ಟ್‌ಗೆ ಹಾಜರುಪಡಿಸಲು ಸರಕಾರಕ್ಕೆ ಆದೇಶಿಸುವಂತೆ ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next