Advertisement

ಕಂಬಳಕ್ಕಾಗಿ ಸುಗ್ರೀವಾಜ್ಞೆ ಜಾರಿಗೆ ತರಲೂ ಸಿದ್ಧ; ಸಿಎಂ ಸಿದ್ದರಾಮಯ್ಯ

01:46 PM Jan 24, 2017 | Team Udayavani |

ಮೈಸೂರು:ಕರಾವಳಿಯ ಸಾಂಸ್ಕೃತಿಕ ಕ್ರೀಡೆಯಾದ ಕಂಬಳಕ್ಕಾಗಿ ಸುಗ್ರೀವಾಜ್ಞೆ ತರಲೂ ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.

Advertisement

ಮೈಸೂರಿಗೆ ಆಗಮಿಸಿದ್ದ ಸಿಎಂ ಅವರಲ್ಲಿ ಕಂಬಳದ ಮೇಲಿನ ನಿಷೇಧ ತೆರವಿಗಾಗಿ ಒತ್ತಡ ಹೆಚ್ಚುತ್ತಿರುವ ಕುರಿತಂತೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ,  ಕಂಬಳ ವಿಶೇಷವಾಗಿ ಕರಾವಳಿಯಲ್ಲಿ ನಡೆಯುವ ಕ್ರೀಡೆಯಾಗಿದೆ. ನಮ್ಮ ಸರ್ಕಾರ ಕಂಬಳದ ಪರವಾಗಿದೆ. ಅಗತ್ಯಬಿದ್ದರೆ ಅಧ್ಯಾದೇಶ ಹೊರಡಿಸಲು ನಾವು ಸಿದ್ದರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಅಲ್ಲದೇ ತಮಿಳುನಾಡಿನ ಜಲ್ಲಿಕಟ್ಟು ಕ್ರೀಡೆಯೇ ಬೇರೆ, ಕಂಬಳವೇ ಬೇರೆ, ಅದನ್ನು, ಇದನ್ನು ಹೋಲಿಕೆ ಮಾಡಬೇಡಿ ಎಂದು ಸಿಎಂ ಹೇಳಿದರು. ಕಂಬಳದ ನಿಷೇಧ ವಿವಾದ ಸದ್ಯ ಹೈಕೋರ್ಟ್ ನಲ್ಲಿದೆ. ಹಾಗಾಗಿ ಹೈಕೋರ್ಟ್ ತೀರ್ಪು ಬಂದ ನಂತರ ಸುಗ್ರೀವಾಜ್ಞೆ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next