Advertisement

ಅಂತಾರಾಜ್ಯ ಸಾರಿಗೆಗೆ ಗ್ರೀನ್ ಸಿಗ್ನಲ್: ಆಂಧ್ರ, ತೆಲಂಗಾಣಕ್ಕೆ ನಾಳೆಯಿಂದ ಬಸ್  ಸಂಚಾರ ಆರಂಭ

05:13 PM Jun 21, 2021 | Team Udayavani |

ಬೆಂಗಳೂರು: ಕೋವಿಡ್ ಎರಡನೇ ಅಲೆಯ ಅಬ್ಬರ ಕಡಿಮೆಯಾಗುತ್ತಿರುವ ಕಾರಣದಿಂದ ರಾಜ್ಯ ಸರ್ಕಾರವು ಅಂತಾರಾಜ್ಯ ಸಾರಿಗೆಗೆ ಅಸ್ತು ಎಂದಿದ್ದು, ತೆಲಂಗಾಣ ಮತ್ತು ಆಂಧ್ರ ಪ್ರದೇಶ ರಾಜ್ಯಗಳಿಗೆ ರಾಜ್ಯ ಸಾರಿಗೆ ಸಂಸ್ಥೆ ಬಸ್ ಸಂಚಾರ ಪುನರಾರಂಭಿಸಲಾಗುತ್ತದೆ.

Advertisement

ಮಂಗಳವಾರದಿಂದ ಅಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಯನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇಕಡಾ 50ರಷ್ಟು ಆಸನ ವ್ಯವಸ್ಥೆಯೊಂದಿಗೆ ಸಾರಿಗೆಗಳ ಕಾರ್ಯಾಚರಣೆಯನ್ನು ಪುನರಾರಂಭಿಸಲಾಗುತ್ತಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮಾತ್ರ ಅಂತಾರಾಜ್ಯ ಸಾರಿಗೆ ಸಂಚಾರ ಕಾರ್ಯ ನಿರ್ವಹಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ:ಆನ್ ಲೈನ್ ತರಗತಿಗೆ ನೆಟ್ ವರ್ಕ್ ಸಮಸ್ಯೆ:ಪರಿಹಾರ ಕಂಡುಕೊಳ್ಳಲು ಸಿಎಂಗೆ ಸುರೇಶ್ ಕುಮಾರ್ ಮನವಿ

ಪ್ರಯಾಣಿಕರು ಕಡ್ಡಾಯ ಮಾಸ್ಕ್ ಧರಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಲಾಗಿದೆ. ಮುಂಗಡ ಆಸನಗಳನ್ನು ಸಂಸ್ಥೆಯ ವೆಬ್ ಸೈಟ್ ನಲ್ಲಿ ಕಾಯ್ದಿಸಬಹುದು

Advertisement

Udayavani is now on Telegram. Click here to join our channel and stay updated with the latest news.

Next