ವಿಧಾನಪರಿಷತ್ ಸದಸ್ಯರೊಂದಿಗೆ ಆನ್ಲೈನ್ ಮೂಲಕ ಸಂವಾದ ನಡೆಸಿದರು. ನಂತರ ಯೋಜನೆ ಕುರಿತು ರಾಜ್ಯದ ಎಲ್ಲ ಜಿಲ್ಲೆಗಳ ಉಪನಿರ್ದೇಶಕರು, ಡಯಟ್ ಪ್ರಾಚಾರ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.
Advertisement
ನಂತರ ಮಾತನಾಡಿ, ಕೋವಿಡ್ ಸಂದಿಗ್ಧತೆಯಲ್ಲಿ ವಿದ್ಯಾರ್ಥಿಗಳನ್ನು ಪಾಠ ಪ್ರವಚನಗಳತ್ತ ಸೆಳೆಯಲು ಜಾರಿಗೊಳಿಸಿರುವ ವಿದ್ಯಾಗಮ ಯೋಜನೆಯು ಗುರುಕುಲ ಮಾದರಿ ಶಾಲೆಗಳನ್ನು ನೆನಪಿಸುತ್ತದೆ. ಈ ಮೂಲಕ ನಮ್ಮ ಸಂಸ್ಕೃತಿಯ ಪುನರುತ್ಥಾನವಾದಂತಾಗಿದೆ. ಈ ಯೋಜನೆ ಮೂಲಕ ಶಿಕ್ಷಣವು ನಮ್ಮ ಕಟ್ಟಕಡೆಯ ಹಳ್ಳಿ ಮಕ್ಕಳಿಗೂ ತಲುಪುವಂತೆ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಬೇಕು ಎಂದು ಸೂಚಿಸಿದರು.
ರಾಜ್ಯದಲ್ಲಿ ಈಗಾಗಲೇ ಹತ್ತು ಲಕ್ಷ ವಿದ್ಯಾರ್ಥಿಗಳು ದಾಖಲಾಗಬೇಕಿತ್ತು. ಆದರೆ, ಕೊರೊನಾದಿಂದ ದಾಖಲಾತಿ ಪ್ರಕ್ರಿಯೆ ಅಷ್ಟೊಂದು ವೇಗವಾಗಿ ಸಾಗಿಲ್ಲ. ಆದ್ದರಿಂದ ಯಾವುದೇ ದಾಖಲೆಗಳನ್ನು ಅಪೇಕ್ಷಿಸದೇ ಮಕ್ಕಳನ್ನು ಶಾಲೆಗೆ ದಾಖಲಿಸಿಕೊಳ್ಳಬೇಕು. ಆ.10ರಿಂದ 15ರ ವರೆಗೆ ದಾಖಲಾತಿ ಅಂದೋಲನದ ಮಾದರಿಯಲ್ಲಿ ನಡೆಯಬೇಕು. ಆ ನಂತರವೂ ಮಕ್ಕಳನ್ನು ದಾಖಲಾತಿ ಪ್ರಕ್ರಿಯೆ ಮುಂದುವರಿಸಬೇಕು. ಮಕ್ಕಳ ಮನೆ ಮನೆಗೆ ಪುಸ್ತಕಗಳನ್ನು ತಲುಪಿಸುವ ಕೆಲಸವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಾಡಬೇಕು
ಎಂದು ಸಚಿವ ಸುರೇಶ್ ಕುಮಾರ್ ನಿರ್ದೇಶಿಸಿದರು.